ನೆರೆ ಸಂತ್ರಸ್ತರಿಗೆ ವಿದೇಶಿ ನೆರವು ನಿರಾಕರಣೆ ಸರಿಯಲ್ಲ: ಬಿ.ಎಂ.ಫಾರೂಕ್
ಮಂಗಳೂರು, ಆ. 23: ನೆರೆ ಸಂತ್ರಸ್ತರಾದವರಿಗೆ ನೆರವು ನೀಡಲು ಯುಎಇ ಸರಕಾರ ಮತ್ತು ಥಾಲ್ಯಾಂಡ್ ಸರಕಾರ ಮುಂದೆ ಬಂದಿದೆ ಆದರೆ ಪ್ರಧಾನಿ ನರೇಂದ್ರ ಮೋದಿ ಈ ನೆರೆವನ್ನು ಸ್ವೀಕರಿಸಲು ಮಂದೆ ಬಾರದಿರುವುದು ಆಶ್ಚರ್ಯವನ್ನುಂಟು ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಯುಎಇ ದೇಶದ ಆರ್ಥಿಕ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡುತ್ತಾ ಬಂದಿರುವ ಕೇರಳದ ನಾಡಿನ ಭಾರತೀಯರಿಗೆ ನೆರೆಯಿಂದಾಗಿ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಅಲ್ಲಿನ ಸಂತ್ರಸ್ತರಿಗೆ ಮಾನವೀಯ ನೆಲೆಯಲ್ಲಿ ನೆರವು ನೀಡಲು ಸಹಜವಾಗಿ ವಿದೇಶದ ಸರಕಾರಗಳು ನೆರವು ನೀಡಲು ಮುಂದೆ ಬಂದಿದೆ. ಸಂತ್ರಸ್ತರ ಹಿತದೃಷ್ಟಿಯಿಂದ ಅವರಿಗೆ ಹೆಚ್ಚಿನ ನೆರವು ನೀಡುವ ದೃಷ್ಟಿಯಿಂದ ವಿದೇಶಿ ರಾಷ್ಟಗಳ ಆರ್ಥಿಕ ಸಹಾಯವನ್ನು ಭಾರತ ಪಡೆಯುವುದರಲ್ಲಿ ತಪ್ಪಿಲ್ಲ. ಎನ್ಡಿಆರ್ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ) ನಿಯಮ ಪ್ರಕಾರ ಈ ರೀತಿಯ ನೆರವು ಪಡೆಯಲು ಅವಕಾಶವಿದೆ ಎಂದು ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಅಧ್ಯಕ್ಷ ವಿಟ್ಲ ಮುಹಮ್ಮದ್ ಕುಂಞ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ, ರಾಜ್ಯ ಕಾರ್ಯದರ್ಶಿ ರಿಝ್ವಾನ್, ವಕ್ತಾರ ಸುಶೀಲ್ ನರ್ಹೋನ್ನಾ, ಜಿಲ್ಲಾ ಮುಖಂಡರಾದ ವಸಂತ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.