ಆ.26: ಮಂಜುನಾಥ ಉದ್ಯಾವರ ಸ್ಮಾರಕ ಅಂಗವಾಗಿ ರಕ್ತದಾನ ಶಿಬಿರ
ಉದ್ಯಾವರ, ಆ.24: ಉದ್ಯಾವರದ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ನ ಆಶ್ರಯದಲ್ಲಿ ಸಾಮಾಜಿಕ ಸೇವಾಕರ್ತ ಮಂಜುನಾಥ ಉದ್ಯಾವರ್ ಅವರ ಆರನೇ ಪುಣ್ಯತಿಥಿಯ ಅಂಗವಾಗಿ ಆ.26ರ ಬೆಳಗ್ಗೆ 9:30 ರಿಂದ ಅಪರಾಹ್ನ 1 ಗಂಟೆಯವರೆಗೆ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆ ಸಹಯೋಗದಿಂ ರಕ್ತದಾನ ಶಿಬಿರ ನಡೆಯಲಿದೆ.
ಶಿಬಿರವನ್ನು ಉದ್ಯಾವರ-ಉಡುಪಿ ರೋಟರಿ ಕ್ಲಬ್ನ ಅಧ್ಯಕ್ಷ ರಾಜೇಶ್ ಡಿ. ಪಾಲನ್ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ರೋಟರಿ ವಲಯ ಸೇನಾನಿ ಕೆ.ಟಿ.ನಾಯ್ಕಾ ವಹಿಸಲಿದ್ದಾರೆ. ಸಾರ್ವಜನಿಕರು ಶಿಬಿರದಲ್ಲಿ ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸುವಂತೆ ಸಂಸ್ಥೆಯ ಅಧ್ಯಕ್ಷ ಅನೂಪ್ ಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಗಿರೀಶ್ ಗುಡ್ಡೆಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story