ಕುತ್ಪಾಡಿ: ‘ಯೋಗ್ಯ’ ರಾಷ್ಟ್ರಮಟ್ಟದ ಕಾರ್ಯಾಗಾರ
ಉಡುಪಿ, ಆ. 24: ಉದ್ಯಾವರ ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಅನಾಟಮಿ, ಶಲ್ಯತಂತ್ರ ವಿಭಾಗದಿಂದ ‘ಯೋಗ್ಯ -2018’ ಇಂಗ್ಯುನಲ್ ಹರ್ನಿಯಾದ ವಿವಿಧ ರೀತಿಯ ಶಸ್ತ್ರ ಚಿಕಿತ್ಸೆ ಕ್ರಮಗಳ ಕುರಿತು ರಾಷ್ಟ್ರಮಟ್ಟದ ಾರ್ಯಾಗಾರವು ಇತ್ತೀಚೆಗೆ ನಡೆಯಿತು.
ಮುಖ್ಯ ಅತಿಥಿಯಾಗಿ ಹಿರಿಯ ಪ್ರಾಧ್ಯಾಪಕ ಡಾ.ಕೆ.ಆರ್.ರಾಮಚಂದ್ರ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಶ್ರೀನಿವಾಸ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಗೌರವ ಪ್ರಾಧ್ಯಾಪಕ ಡಾ.ಮುರಳೀಧರ ಶರ್ಮ, ಸಂದರ್ಶಕ ಶಸ್ತ್ರ ಚಿಕಿತ್ಸಾ ತಜ್ಞ ಡಾ.ಎ.ಆರ್. ಆಚಾರ್ಯ ಇಂಗ್ಯುನಲ್ ಹರ್ನಿಯಾದ ವಿವಿಧ ರೀತಿಯ ಶಸ್ತ್ರಚಿಕಿತ್ಸೆ ಕ್ರಮಗಳ ಕುರಿತು ನೈಜ ಹಾಗೂ ಶವವಿಚ್ಛೇದನ ಕ್ರುಗಳ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.
ಶಲ್ಯತಂತ್ರ ವಿಭಾಗ ಮುಖ್ಯಸ್ಥ ಡಾ.ರಜನೀಶ್ ಗಿರಿ ಸ್ವಾಗತಿಸಿದರು. ಅನಾ ಟಮಿ ವಿಭಾಗ ಮುಖ್ಯಸ್ಥ ಡಾ.ಕೃಷ್ಣಮೂರ್ತಿ ಎನ್. ವಂದಿಸಿದರು. ಶಲ್ಯತಂತ್ರ ವಿಭಾಗದ ಸಹಪ್ರಾಧ್ಯಾಪಕ ಡಾ.ಪ್ರಶಾಂತ್ ಕೆ. ಕಾರ್ಯಕ್ರಮ ನಿರೂಪಿಸಿದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್ಡಿಎಂ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಮಮತಾ ಕೆ.ವಿ. ವಹಿಸಿದ್ದರು. ಅನಾ ಟಮಿ ವಿಭಾಗ ಮುಖ್ಯಸ್ಥ ಡಾ.ಕೃಷ್ಣಮೂರ್ತಿ ಎನ್. ಸ್ವಾಗತಿಸಿದರು. ಶಲ್ಯತಂತ್ರ ವಿಭಾಗ ಮುಖ್ಯಸ್ಥ ಡಾ.ರಜನೀಶ್ ಗಿರಿ ವಂದಿಸಿದರು. ಅನಾಟಮಿ ವಿಭಾಗ ಸಹಾಯಕ ಪ್ರಾಧ್ಯಾಪಕಿ ಡಾ.ಹರ್ಷಿತಾ ಎಂ.ಎಸ್. ಕಾರ್ಯಕ್ರಮ ನಿರೂ ಪಿಸಿದರು. ದೇಶದ ವಿವಿಧ ಭಾಗಗಳಿಂದ 50ಕ್ಕೂ ಅಧಿಕ ಆಯುರ್ವೇದ ವೈದ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.