ಚೈಲ್ಡ್ ಲೈನ್ನಿಂದ ‘ತೆರೆದ ಮನೆ’ ಕಾರ್ಯಕ್ರಮ
ಮಂಗಳೂರು, ಆ.28: ಚೈಲ್ಡ್ಲೈನ್-1098 ಕುರಿತು ಜನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳದ ಮದ್ವ ಸರಕಾರಿ ಶಾಲೆಯಲ್ಲಿ ‘ತೆರೆದ ಮನೆ’ ಕಾರ್ಯಕ್ರಮ ಜರುಗಿತು. ಚೈಲ್ಡ್ಲೈನ್ನ ಭಿತ್ತಿ ಪತ್ರವನ್ನು ಪ್ರದರ್ಶಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಚೈಲ್ಡ್ಲೈನ್ನ ಕೇಂದ್ರ ಸಂಯೋಜಕ ದೀಕ್ಷಿತ್ ಅಚ್ರಪ್ಪಾಡಿವರು ಸಂಸ್ಥೆಯ ಸೇವೆಗಳು ಹಾಗೂ ತೆರೆದ ಮನೆ ಕಾರ್ಯಕ್ರಮದ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆಯ ಪಾತ್ರದ ಕುರಿತು ಬಂಟ್ವಾಳ ನಗರ ಠಾಣೆಯ ಎಸ್ಸೈ ರತ್ನಕುಮಾರ್ ಮಾತನಾಡಿದರು.
ಮಕ್ಕಳ ರಕ್ಷಣೆಯಲ್ಲಿ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಪಾತ್ರದ ಕುರಿತು ಶಿಕ್ಷಣ ಸಂಪನ್ಮೂಲ ಕೇಂದ್ರ ಬಂಟ್ವಾಳ ಇದರ ಸದಸ್ಯ ದಿನಕರ್ ಗಟ್ಟಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ವಿಜಯ್, ಚೈಲ್ಡ್ಲೈನ್ ನಗರ ಸಂಯೋಜಕ ಯೊಗೀಶ್ ಮಲ್ಲಿಗೆಮಾಡು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಲೋಲಾಕ್ಷಿ ಮತ್ತು ಮುಹಮ್ಮದ್ ನಝೀರ್ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಭವಾನಿ ಸ್ವಾಗತಿಸಿದರು. ಚೈಲ್ಡ್ಲೈನ್ನ ಆಶಾಲತ ಕುಂಪಲ ವಂದಿಸಿದರು. ಮಕ್ಕಳ ಸಹಾಯವಾಣಿಯ ತಂಡ ಸದಸ್ಯೆ ಅಸುಂತಾ ಕಾರ್ಯಕ್ರಮ ನಿರೂಪಿಸಿದರು.