ಸ್ಥಳೀಯ ಸಂಸ್ಥೆಗಳ ಚುನಾವಣೆ ಬಿಜೆಪಿ ಜಯಭೇರಿ: ಮಟ್ಟಾರು
ಉಡುಪಿ, ಆ.29: ಕರ್ನಾಟಕದ ನಗರ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಆ.31ರ ಶುಕ್ರವಾರ ನಡೆಯುವ ಚುನಾವಣೆಯಲ್ಲಿ ಜಿಲ್ಲೆಯ ಉಡುಪಿ ನಗರಸಭೆ, ಕಾರ್ಕಳ ಪುರಸಭೆ, ಕುಂದಾಪುರ ಪುರಸಭೆ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ನಲ್ಲಿ ಕಳೆದ ವಿಧಾನಸಭಾ ಚುನಾವಣಾ ಫಲಿತಾಂಶ ಪುನರಾವರ್ತನೆಯಾಗಲಿದ್ದು, ಬಿಜೆಪಿ ಭರ್ಜರಿ ಜಯಗಳಿಸಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಹೇಳಿದ್ದಾರೆ.
ಉಡುಪಿ ನಗರಸಭೆಯಲ್ಲಿ ಕಳೆದ ಐದು ವರ್ಷಗಳ ಕಾಂಗ್ರೆಸ್ ಆಡಳಿತದಿಂದ ಜನತೆ ಸಹನೆಯನ್ನು ಕಳೆದುಕೊಂಡಿದ್ದು, ಅಭಿವೃದ್ಧಿಯ ಹೆಸರಿನಲ್ಲಿ ನಗರಸಭೆ ಯನ್ನು ಭ್ರಷ್ಟಾಚಾರದ ಕೂಪಕ್ಕೆ ತಳ್ಳಲಾಗಿದೆ. ಈಗ ಜನರಿಗೆ ಆಧುನಿಕ ನಗರ, ವಿಶ್ವ ದರ್ಜೆಯ ಮೂಲ ಸೌಕರ್ಯ, ಜನರ ಅಭಿವೃದ್ಧಿಯ ಕನಸು ನನಸು, ಸ್ವಚ್ಛ ಸುಂದರ ಉಡುಪಿ ಎಂದು ಮತ್ತೆ ಮೋಸಗೊಳಿಸುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದವರು ದೂರಿದರು.
ಉಡುಪಿಯ ಜನತೆ ಇದಕ್ಕೆ ಸರಿಯಾದ ಉತ್ತರವನ್ನು ಚುನಾವಣೆಯಲ್ಲಿ ನೀಡಲಿದ್ದಾರೆ. ಉಡುಪಿ ನಗರಸಭೆಯ 35 ವಾರ್ಡ್ಗಳಲ್ಲಿ 30ಕ್ಕೂ ಅಧಿಕ ಸ್ಥಾನಗಳನ್ನು, ಕುಂದಾಪುರದ 23 ಕ್ಷೇತ್ರಗಳಲ್ಲಿ ಕನಿಷ್ಠ 20, ಸಾಲಿಗ್ರಾಮದ 16 ಕ್ಷೇತ್ರಗಳಲ್ಲಿ ಕನಿಷ್ಠ 14 ಹಾಗೂ ಕಾರ್ಕಳದ 23 ಕ್ಷೇತ್ರಗಳಲ್ಲಿ ಕನಿಷ್ಠ 20 ಸ್ಥಾನ ಗಳನ್ನು ಬಿಜೆಪಿ ಗೆಲ್ಲಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.
ಇಡೀ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು ಶೇ.70ಕ್ಕಿಂತಲೂ ಹೆಚ್ಚು ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ಹೇಳಿದ ಹೆಗ್ಡೆ, ಜಿಲ್ಲೆಯ ಮೂವರು ಶಾಸಕರು ತಮ್ಮ ಕನಸಿನ ಆಡಳಿತವನ್ನು ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ನಲ್ಲಿ ನೀಡಲಿದ್ದಾರೆ ಎಂದು ಹೆಗ್ಡೆ ನುಡಿದರು.
ಇಡೀ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು ಶೇ.70ಕ್ಕಿಂತಲೂ ಹೆಚ್ಚು ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ಹೇಳಿದ ಹೆಗ್ಡೆ, ಜಿಲ್ಲೆಯ ಮೂವರು ಶಾಸಕರು ತಮ್ಮ ಕನಸಿನ ಆಡಳಿತವನ್ನು ನಗರ ಸೆ,ಪುರಸೆ ಮತ್ತು ಪಟ್ಟಣ ಪಂಚಾಯತ್ನಲ್ಲಿ ನೀಡಲಿದ್ದಾರೆ ಎಂದು ಹೆಗ್ಡೆ ನುಡಿದರು.