ಕಾರ್ಕಳ: ತಂಬಾಕು ನಿಯಂತ್ರಣಾ ತನಿಖಾ ದಳದಿಂದ ದಾಳಿ
ಉಡುಪಿ, ಆ.29: ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ಕಾರ್ಕಳ ತಾಲೂಕಿನ ಬೆಳ್ಮಣ್ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್ಗಳು, ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಲಾಗಿದೆ.
ಈ ವೇಳೆ ಒಟ್ಟು 32 ಪ್ರಕರಣ ದಾಖಲಿಸಿ 2800 ರೂ. ದಂಡ ವಸೂಲಿ ಮಾಡಲಾಯಿತು. ದಾಳಿಯಲ್ಲಿ, ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಹಿರಿಯ ಆರೋಗ್ಯ ಸಹಾಯಕ ಶಿವರಾಮ ಭಟ್, ಪೋಲೀಸ್ ಠಾಣೆಯ ಆರಕ್ಷಕ ಮಂಜುನಾ್ ಹಾಗೂ ಇತರರು ಭಾಗವಹಿಸಿದ್ದರು.
Next Story