ಸೆ.2: ಕೆಥೊಲಿಕ್ ಸಭಾದಿಂದ ಆರೋಗ್ಯ ಕಾರ್ಡ್ ವಿತರಣೆ
ಉಡುಪಿ, ಆ. 30: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ವತಿಯಿಂದ ನೀಡಲಾಗುವ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡುಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೆ.2ರಂದು ರವಿವಾರ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ಚರ್ಚ್ ಸಭಾಂಗಣದಲ್ಲಿ ಜರಗಲಿದೆ.
ಬೆಳಗ್ಗೆ 10 ಗಂಟೆಗೆ ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅ.ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ಉದ್ಘಾಟಿಸಲಿದ್ದು, ಕರ್ನಾಟಕ ಲೋಕ ಸೇವಾ ಆಯೋಗದ ಸದಸ್ಯರಾದ ಡಾ.ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಂಬಯಿ ಜೋನ್ ಡಿಸಿಲ್ವಾ ಫೌಂಡೇಶನ್ನ ಅಧ್ಯಕ್ಷ ಜೋನ್ ಡಿಸಿಲ್ವಾ, ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಆಧ್ಯಾತ್ಮಿಕ ನಿರ್ದೇಶಕ ವಂ. ಫರ್ಡಿನಾಂಡ್ ಗೊನ್ಸಾಲ್ವಿಸ್, ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ಚರ್ಚ್ ಧರ್ಮಗುರುಗಳಾದ ವಂ.ಸ್ಟಾನಿ ಬಿ ಲೋಬೊ, ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ನಿಕಟಪೂರ್ವ ಅಧ್ಯಕ್ಷರಾದ ವಲೇರಿಯನ್ ಆರ್. ಫೆರ್ನಾಂಡಿಸ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜೋನ್ ಡಿಸಿಲ್ವಾ ಫೌಂಡೇಶನ್ ವತಿಯಿಂದ ಉಡುಪಿ ಧರ್ಮಪ್ರಾಂತ ವ್ಯಾಪ್ತಿಯ ಪ್ರತಿಯೊಂದು ಚರ್ಚಿನಿಂದ 2017-18ನೇ ಸಾಲಿನ ಎಸೆಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ತೋರಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುವುದು. ಇದೇ ವೇಳೆ ಮಣಿಪಾಲ ಕೊಂಕಣಿ ಆರೋಗ್ಯ ಸುರಕ್ಷಾ ಕಾರ್ಡುಗಳನ್ನು ಸಹ ವಿತರಣೆ ಮಾಡಲಾಗುವುದು ಎಂದು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.