ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮತ ಎಣಿಕೆ ಕಾರ್ಯ ಆರಂಭ
ಮಂಗಳೂರು, ಸೆ.3: ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರವಾರ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ.
ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಮಹಾನಗರ ಪಾಲಿಕೆ ಸಹಿತ 21 ಜಿಲ್ಲೆಗಳ 29 ನಗರಸಭೆಗಳು, 53 ಪುರಸಭೆಗಳು ಹಾಗೂ 20 ಪಟ್ಟಣ ಪಂಚಾಯತ್ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇದೀಗ ಪ್ರಾರಂಭಗೊಂಡಿದೆ.
ದ.ಕ. ಜಿಲ್ಲೆಯ ಉಳ್ಳಾಲ ಮತ್ತು ಪುತ್ತೂರು ನಗರಸಭೆ ಹಾಗೂ ಬಂಟ್ವಾಳ ಪುರಸಭೆಗೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಉಡುಪಿ ನಗರಸಭೆ, ಕುಂದಾಪುರ ಹಾಗೂ ಕಾರ್ಕಳ ಪುರಸಭೆ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ಗೆ ಆ.31ರಂದೂ ಚುನಾವಣೆ ನಡೆದಿದ್ದು, ಮತ ಎಣಿಕೆ ಕಾರ್ಯ ಆರಂಭಗೊಂಡಿದೆ.
ಉಳ್ಳಾಲ ನಗರಸಭೆಯ ಮತ ಎಣಿಕೆಯು ಭಾರತ್ ಹೈಸ್ಕೂಲ್ ಉಳ್ಳಾಲ, ಪುತ್ತೂರು ನಗರಸಭೆಯ ಮತ ಎಣಿಕೆಯು ಪುತ್ತೂರು ತಾಲೂಕು ಕಚೇರಿ, ಬಂಟ್ವಾಳ ಪುರಸಭೆಯ ಮತ ಎಣಿಕೆಯು ಬಂಟ್ವಾಳ ತಾಲೂಕು ಕಚೇರಿಯಲ್ಲಿ ನಡೆಯುತ್ತಿದೆ.
ಉಡುಪಿ ನಗರಸಭೆ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ನ ಮತ ಎಣಿಕಾ ಕೇಂದ್ರ ಕುಂಜಿಬೆಟ್ಟು ಟಿ.ಎ.ಪೈ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಪುರಸಭೆ ಮತ ಎಣಿಕೆ ಕೇಂದ್ರ ಕುಂದಾಪುರದ ಮಿನಿವಿಧಾನ ಸೌಧದ ತಾಲೂಕು ಕಚೇರಿ ಕೋರ್ಟ್ ಹಾಲ್ ಹಾಗೂ ಕಾರ್ಕಳ ಪುರಸಭೆಯ ಮತಎಣಿಕಾ ಕೇಂದ್ರ ಕಾರ್ಕಳ ಮಿನಿ ವಿಧಾನ ಸೌಧದ ತಾಲೂಕು ಕಚೇರಿ ಹಾಲ್ನಲ್ಲಿ ಈಗಾಗಲೇ ಆರಂಭಗೊಂಡಿದೆ.