ಉಳ್ಳಾಲದಲ್ಲಿ ಎಸ್ಡಿಪಿಐ ಜೊತೆ ಮೈತ್ರಿ ಇಲ್ಲ: ಸಚಿವ ಯು.ಟಿ.ಖಾದರ್
ಮಂಗಳೂರು, ಸೆ.3: ಉಳ್ಳಾಲ ನಗರಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದಿಷ್ಟು ಹಿನ್ನಡೆಯಾಗಿದೆ. ಆದರೆ ಇಲ್ಲಿ ಅಧಿಕಾರಕ್ಕಾಗಿ ಎಸ್ಡಿಪಿಐ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಚುನಾವಣೆಯಲ್ಲಿ ಪಕ್ಷಕ್ಕೆ ಒಂದಿಷ್ಟು ಹಿನ್ನಡೆಯಾಗಿದೆ. ಸೋಲಿನ ಬಗ್ಗೆ ಪರಾಮರ್ಶೆ ನಡೆಸಲಾಗುವುದು ಎಂದರು. ಆದರೆ ಎಸ್ಡಿಪಿಐ ಜೊತೆ ಮೈತ್ರಿ ಮಾಡಿಕೊಂಡು ಆಡಳಿತಕ್ಕೇರುವ ಬಗ್ಗೆ ನಕರಾತ್ಮಕ ಪ್ರತಿಕ್ರಿಯೆ ವ್ಯಕ್ತಪಡಿಸಿದರು.
Next Story