ಶಿಕ್ಷಕರಿಗೆ ಸಮರ್ಪಕ ಸಂಬಳ ಪಾವತಿ ಅಗತ್ಯ: ಜಿ.ಶಂಕರ್
ಉಡುಪಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ
ಉಡುಪಿ, ಸೆ.5: ಕಳೆದ ಆರು ತಿಂಗಳುಗಳಿಂದ ಶಿಕ್ಷಕರಿಗೆ ಸಂಬಳ ಪಾವತಿ ಯಾಗಿಲ್ಲ. ಈ ಕುರಿತು ಸ್ಥಳೀಯ ಜನಪ್ರತಿನಿಧಿಗಳು ಸರಕಾರ ಗಮನಕ್ಕೆ ತಂದು, ಪ್ರತಿ ತಿಂಗಳು ಸಮರ್ಪಕವಾಗಿ ಶಿಕ್ಷಕರಿಗೆ ಸಂಬಳ ಪಾವತಿಯಾಗುವಂತೆ ಮಾಡ ಬೇಕು ಎಂದು ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ನ ಅಧ್ಯಕ್ಷ ಡಾ.ಜಿ.ಶಂಕರ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಿತಿ, ಅಂಬಲಪಾಡಿ ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಸಹಯೋಗದೊಂದಿಗೆ ಡಾ.ಎಸ್.ರಾಧಾ ಕೃಷ್ಣನ್ ಜನ್ಮದಿನದ ಅಂಗವಾಗಿ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭ ದಲ್ಲಿ ಅವರು ಮಾತನಾಡುತಿದ್ದರು.
ಮಕ್ಕಳಿಗೆ ಸಂಸ್ಕಾರ ಕಲಿಸುವ ಶಿಕ್ಷಕರು, ಇಡೀ ಸಮಾಜಕ್ಕೆ ಮಾದರಿ. ಅವರ ದಿನಾಚರಣೆಗೆ ಸರಕಾರ ರಜೆ ಘೋಷಿಸುವ ಕೆಲಸ ಮಾಡಬೇಕು ಎಂದ ಅವರು, ಕನ್ನಡ ಶಾಲೆ, ಶಿಕ್ಷಕರು ಹಾಗೂ ಮಕ್ಕಳ ಬಗ್ಗೆ ಮನೋಜ್ಞವಾಗಿ ಚಿತ್ರಿಸಿರುವ ಕಾಸರಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಲನಚಿತ್ರವನ್ನು ಜಿಲ್ಲೆಯ ಮಕ್ಕಳಿಗೆ ತೋರಿಸುವ ಕೆಲಸವನ್ನು ಇಲಾಖೆ ಮಾಡಬೇಕು. ಇದಕ್ಕೆ ಬೇಕಾದ ಸಹಾಯವನ್ನು ಟ್ರಸ್ಟ್ ಮೂಲಕ ಮಾಡಲಾಗುವುದು ಎಂದರು.
ಸಮಾರಂಭವನ್ನು ಉದ್ಘಾಟಿಸಿದ ಜಿಪಂ ಅಧ್ಯಕ್ಷ ದಿನಕರ ಬಾಬು ಮಾತ ನಾಡಿ, ಭಾರತದಲ್ಲಿ ಶಿಕ್ಷಕರಿಗೆ ಸಾಕಷ್ಟು ಗೌರವದ ಸ್ಥಾನ ಇದೆ. ಉತ್ತಮ ಸಮಾಜ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದು. ಜಿಲ್ಲೆಯ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅಪಾರ ಎಂದು ಹೇಳಿದರು.
ಅಧ್ಯಕ್ಷತೆಯನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ, ಜಿಲ್ಲಾ ಸಾಧಕ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಡುಪಿ ವಲಯ ನಿವೃತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ಟ್ರಸ್ಟ್ ವತಿಯಿಂದ ಜಿಲ್ಲಾ ಅನುದಾನಿತ ರಹಿತ ಶಾಲಾ ಶಿ್ಷಕರುಗಳನ್ನು ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಡಯಟ್ ಪ್ರಾಂಶುಪಾಲ ನಾಗೇಶ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ, ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕಿರಣ್ ಹೆಗ್ಡೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ಬಿ.ವಿ., ತಾಲೂಕು ಅಧ್ಯಕ್ಷ ಮಂಗಳ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶಪ್ಪ ಉಪಸ್ಥಿತರಿ ದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಸ್ವಾಗತಿಸಿದರು. ರಘುರಾಮ್ ಕಾರ್ಯಕ್ರಮ ನಿರೂಪಿಸಿದರು.