ಬ್ರಹ್ಮಾವರದಲ್ಲಿ ಶ್ರೀಕೃಷ್ಣ ಜಯಂತಿ ಆಚರಣೆ
ಉಡುಪಿ, ಸೆ.5: ಕಂದಾಯ ಇಲಾಖೆ ವತಿಯಿಂದ ಬ್ರಹ್ಮಾವರದಲ್ಲಿ ಶ್ರೀಕೃಷ್ಣ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಉದ್ಘಾಟಿಸಿದರು.
ಉಡುಪಿ ಶಾಸಕ ರಘುಪತಿ ಭಟ್ ಶ್ರೀಕೃಷ್ಣನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ವಾರಂಬಳ್ಳಿ ಗ್ರಾಪಂ ಅಧ್ಯಕ್ಷ ನವೀನ್ಚಂದ್ರ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಮುದುಕೃಷ್ಣ ಸ್ಪರ್ಧೆಯನ್ನು ಆಯೋಜಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಜಿಪಂ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ, ದಿನಕರ ಹೇರೂರು, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಚಾಂತಾರು ಗ್ರಾಪಂ ಸದಸ್ಯ ಸುಧೀರ್ ಶೆಟ್ಟಿ, ಕಾಡೂರು ತಾಪಂ ಸದಸ್ಯ ುಜಂಗ ಶೆಟ್ಟಿ, ವಾರಂಬಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ನಿತ್ಯಾನಂದ ಬಿ.ಆರ್., ಶಿಶು ಕಲ್ಯಾಣ ಇಲಾಖೆಯ ಅಧಿಕಾರಿ ಶೋಭಾ ಶೆಟ್ಟಿ, ಜಿಲ್ಲಾ ಯಾದವ ಗೊಲ್ಲ ಸಮಾಜದ ಅಧ್ಯಕ್ಷ ಪುಟ್ಟಣ್ಣ ಗೊಲ್ಲ, ಮಹಿಳಾ ಗೊಲ್ಲ ಸಮಾಜದ ಕಾರ್ಯದರ್ಶಿ ಗೀತಾ ಗೊಲ್ಲ, ಶಂಭು ಗೊಲ್ಲ, ಮಧುಸೂದನ ಗೊಲ್ಲ, ಸುಬ್ರಹಣ್ಯ ಯಾದವ ಉಪಸ್ಥಿತರಿದ್ದರು.
ಆಕಾಶವಾಣಿ ಕಲಾವಿದ ಚಂದ್ರಶೇಖರ್ ಕೆದ್ಲಾಯ ಶ್ರೀಕೃಷ್ಣನ ಬಾಲಲೀಲೆಯ ಕುರಿತು ಜಾನಪದ ಗೀತೆಗಳನ್ನು ಹಾಡಿ ರಂಜಿಸಿದರು. ಬ್ರಹ್ಮಾವರ ತಹಶೀಲ್ದಾರ್ ಅನಿಲ್ ಕುಮಾರ್ ಸ್ವಾಗತಿಸಿ ಸುರೇಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮೀನಾರಾಯಣ ಭಟ್ ವಂದಿಸಿದರು.