ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ಕಾರ್ಯಾಗಾರ
ಮಂಗಳೂರು, ಸೆ.8: ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ನ (ಎಲ್ಎಂಇಟಿ) ಅಂಗ ಸಂಸ್ಥೆಯಾದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಂಸ್ಧೆಯಲ್ಲಿ ಅಗ್ನಿ ದುರಂತ ತಡೆಯಲು ಮುನ್ನೆಚ್ಚರಿಕೆಯ ಕ್ರಮಗಳ ಕುರಿತು ಇತ್ತೀಚೆಗೆ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ದ.ಕ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮುಹಮ್ಮದ್ ಝುಲ್ಫಿಕರ್ ನವಾಝ್ ಭಾಗವಹಿಸಿ ಮಾಹಿತಿ ನೀಡಿದರು. ಸಂಸ್ಥೆಯ ನಿರ್ದೇಶಕ ಡಾ. ಟಿ. ಜಯಪ್ರಕಾಶ್ ರಾವ್, ಪ್ರೊ. ಸ್ವಪ್ನಾ ಶೆಟ್ಟಿ ಜೆ. ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಸ್ವಾತಿ ಲಕ್ಷ್ಮಿ ವಂದಿಸಿದರು. ರಜಿನ್ ರಾಜನ್ ಕಾರ್ಯಕ್ರಮ ನಿರೂಪಿಸಿದರು.
Next Story