ಬಂಟ್ವಾಳ ಶಾಸಕರ ಕಾರಿಗೆ ಕಲ್ಲೆಸೆತ
ಬಂಟ್ವಾಳ, ಸೆ.10: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸಂಚರಿಸುತ್ತಿದ್ದ ಕಾರಿನ ಮೇಲೆ ಕಲ್ಲೆಸೆದ ಘಟನೆ ಬೋಳಂಗಡಿಯಲ್ಲಿ ನಡೆದಿರುವುದು ವರದಿಯಾಗಿದೆ.
ಶಾಸಕರು ಬಂಟ್ವಾಳದಿಂದ ಕಲ್ಲಡ್ಕಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಶಾಸಕರಿದ್ದ ಕಾರು ಬೋಳಂಗಡಿ ತಲುಪುತ್ತಿದ್ದಂತೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರೆನ್ನಲಾಗಿದೆ. ಇದರಿಂದ ಕಾರಿನ ಎಡಭಾಗಕ್ಕೆ ಸ್ವಲ್ಪ ಹಾನಿಯಾಗಿದೆ.
ಘಟನೆಯ ಬಗ್ಗೆ ಶಾಸಕ ರಾಜೇಶ್ ನಾಯ್ಕೆ ಅವರು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಈ ನಡುವೆ ಕಲ್ಲೆಸೆತ ವಿಚಾರ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ನಗರ ಠಾಣೆಯೆದುರು ಜಮಾಯಿಸಿ ಕೃತ್ಯ ಎಸಗಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು.
Next Story