ಕಡಬ: ವಾಹನ ಚಾಲಕರಿಬ್ಬರ ಜಗಳ; ಓರ್ವನಿಗೆ ಗಾಯ
ಕಡಬ, ಸೆ.11. ತೂಫಾನ್ ವಾಹನ ಚಾಲಕರಿಬ್ಬರ ನಡುವೆ ಕ್ಷುಲ್ಲಕ ವಿಚಾರದಲ್ಲಿ ಜಗಳ ಸಂಭವಿಸಿ ಓರ್ವ ಗಾಯಗೊಂಡ ಘಟನೆ ಕಡಬದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಜಬ್ಬಾರ್ ಎಂಬವರು ಗಾಯಗೊಂಡಿದ್ದಾರೆ. ಹಲ್ಲೆ ಆರೋಪಿ ಅಬ್ದುಲ್ ರಹಿಮಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡಬ-ಉಪ್ಪಿನಂಗಡಿ ನಡುವೆ ಬಾಡಿಗೆ ನಡೆಸುವ ಕ್ಯೂ ವಿಚಾರದಲ್ಲಿ ಜಬ್ಬಾರ್ ಹಾಗೂ ಅಬ್ದುಲ್ ರಹಿಮಾನ್ ನಡುವೆ ಮಾತಿನ ಚಕಮಕಿ ನಡೆದಿದೆ. ಇದು ವಿಕೋಪಕ್ಕೆ ತಿರುಗಿದ್ದು, ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಜಬ್ಬಾರ್ ಗಾಯಗೊಂಡಿದ್ದು, ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಅಬ್ದುಲ್ ರಹಿಮಾನ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Next Story