ಬಂಟಕಲ್: ಉದ್ಯಮಶೀಲತಾ ತಿಳುವಳಿಕೆ ಶಿಬಿರ
ಶಿರ್ವ, ಸೆ.11: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಅಹ್ಮದಾಬಾದಿನ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಬಂಟಕಲ್ ಶ್ರೀಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್ ಕಾಲೇಜಿನ ಉದ್ಯಮಶೀಲತಾ ಅಭಿವೃದ್ಧಿ ಘಟಕದ ಆಶ್ರಯದಲ್ಲಿ ಮೂರು ದಿನಗಳ ಉದ್ಯಮಶೀಲತಾ ತಿಳುವಳಿಕೆ ಶಿಬಿರ ಇತ್ತೀಚೆಗೆ ನಡೆಯಿತು.
ಶಿಬಿರವನ್ನು ಉದ್ಘಾಟಿಸಿದ ಕಟಪಾಡಿ ಶ್ರೀಮಾತಾ ಇಂಡಸ್ಟ್ರೀಟ್ನ ನರಸಿಂಹ ಪೈ ಮಾತನಾಡಿ, ಬದ್ಧತೆ, ಶಿಸ್ತು ಮತ್ತು ಕಠಿಣ ಪರಿಶ್ರಮಗಳು ಯಶಸ್ವಿ ಉದ್ಯಮಿ ಯಾಗಲು ಅತ್ಯಂತ ಅಗತ್ಯ. ಯಾವುದೇ ಉದ್ಯಮದ ಯಶಸ್ಸಿಗೆ ನಾವೀನ್ಯತೆ ಯೊಂದೇ ಕೀಲಿಕೈ ಎಂದು ಅಭಿಪ್ರಾಯಪಟ್ಟರು.
ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲ ಪ್ರೊ.ತಿರುಮಲೇಶ್ವರ ಭಟ್ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಕಾರ್ಯಕ್ರಮದ ಸಂಯೋಜಕ ಅರುಣ್ ಉಪಾಧ್ಯಾಯ ಸ್ವಾಗತಿಸಿ ದರು. ಸಚಿನ್ ಪ್ರಭು ವಂದಿಸಿದರು. ಸೌಮ್ಯಾ ಭಟ್ ಕಾರ್ಯಕ್ರಮ ನಿರೂಪಿಸಿ ದರು.
Next Story