ಅಡಿಕೆ ಕೊಳೆರೋಗ ಪರಿಹಾರಕ್ಕೆ ಸೆ.17ರೊಳಗೆ ಅರ್ಜಿ ಸಲ್ಲಿಸಿ
ಉಡುಪಿ, ಸೆ.12: ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದಾಗಿ ಅಡಿಕೆಗೆ ಕೊಳೆರೋಗದಿಂದ ಹಾನಿಯಾಗಿದ್ದು, ಇದರ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಸೆ.17ರವರೆಗೆ ಮಾತ್ರ ಕಾಲಾವಕಾಶ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಜಿಲ್ಲೆಯಎಲ್ಲಾ ಗ್ರಾಪಂಗಳಲ್ಲಿ ಗ್ರಾಮಲೆಕ್ಕಿಗರ ಕಚೇರಿ ಹಾಗೂ ತೋಟಗಾರಿಕಾ ಇಲಾಖೆಯಲ್ಲಿ ಕೊಳೆರೋಗ ಪರಿಹಾರಕ್ಕಾಗಿ ಜಿಲ್ಲೆಯ ರೈತರಿಂದ ಸೆ.7ರಂದು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸರಕಾರಕ್ಕೆ ಕ್ಲಪ್ತ ಕಾಲದಲ್ಲಿ ವರದಿಯನ್ನು ಸಲ್ಲಿಸಬೇಕಾಗಿರುವುದರಿಂದ ಕೊಳೆರೋಗದಿಂದ ನಷ್ಟಕ್ಕೊಳಗಾದ ಎಲ್ಲಾ ರೈತರು ಸೆ.17ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ. ಎಲ್ಲಾ ರೈತರು ನಿಗದಿತ ಅವಧಿಯೊಳಗೆ ಅರ್ಜಿಗಳನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
Next Story