ಸೆ.16: ಕಡಿಯಾಳಿಯಲ್ಲಿ ಅನ್ನ ಸಂತರ್ಪಣೆ
ಉಡುಪಿ, ಸೆ.14: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಡಿಯಾಳಿ ತನ್ನ 52ನೇ ವರ್ಷದ ಗಣೇಶೋತ್ಸವವನ್ನು ಆಚರಿಸುತಿದ್ದು ಸೆ.16ರ ಅಪರಾಹ್ನ 12:30ಕ್ಕೆ 108 ಕಾಯಿಗಳ ವಿಶೇಷ ಗಣಹೋಮ ಬಳಿಕ ಸಾರ್ವಜನಿಕ ಮಹಾಅನ್ನಸಂತರ್ಪಣೆ ನಡೆಯಲಿದೆ.
ಸಂಜೆ 5:30ಕ್ಕೆ ವಾಯುಸೇನೆಯ ನಿವೃತ್ತ ಅಧಿಕಾರಿ ವಾಸುದೇವ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಲಿದ್ದು, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ರಾತ್ರಿ 9 ರಿಂದ ರಂಗತರಂಗ ಕಲಾವಿದರು ಕಾಪು ಇವರಿಂದ ತುಳು ಹಾಸ್ಯಮಯ ನಾಟಕ ಮೋಕ್ಷ ನಡೆಯಲಿದೆ ಎಂದು ಸಮಿತಿಯ ಪ್ರಧಾನ ಕಾರ್ಯರ್ಶಿ ಕೆ. ರಾಘವೇಂದ್ರ ಕಿಣಿ ತಿಳಿಸಿದ್ದಾರೆ.
Next Story