ಭಟ್ಕಳ : ಮನೆಗೆ ನುಗ್ಗಿ ಚಿನ್ನಾಭರಣ ಕಳವು
ಭಟ್ಕಳ, ಸೆ. 14: ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮನೆಯವರು ಸಾರ್ವಜನಿಕ ಗಣೇಶನ ಪೂಜೆಗೆ ತೆರಳಿದ್ದ ಸಂದರ್ಭದಲ್ಲಿ ಒಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಘಟನೆ ಶುಕ್ರವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ.
ತಾಲೂಕಿನ ಹೆಬಳೆ ಗ್ರಾಮ ಪಂ. ಕಾರ್ಯದರ್ಶಿ ಲಿಂಗಪ್ಪ ನಾಯ್ಕ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹಿಂಬದಿಯ ಬಾಗಿಲನ್ನು ಭದ್ರವಾಗಿ ಹಾಕದೇ ಇದ್ದುದರಿಂದ ದುಷ್ಕರ್ಮಿಗಳು ಒಳಗೆ ನುಗ್ಗಿ 20 ಸಾವಿರ ನಗದು ಹಾಗೂ 10 ಉಂಗುರ, ಸರ, ಬಳೆ ಸೇರಿದಂತೆ 2 ಲಕ್ಷಕ್ಕೂ ಹೆಚ್ಚು ಮೌಲ್ಯ ದ ಚಿನ್ನ ಆಭರಣ ದೋಚಲಾಗಿದೆ. ಸ್ಥಳಕ್ಕೆ ಪೊಲೀಸರು ಶ್ವಾನ ದಳದೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Next Story