ರಫೇಲ್ ಹಗರಣ: 18ಕ್ಕೆ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಉಡುಪಿ, ಸೆ.15: ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ 45 ಸಾವಿರ ಕೋಟಿ ರೂ. ರಫೇಲ್ ಯುದ್ಧ ವಿಮಾನ ಹಗರಣದ ಮೂಲಕ ದೇಶವನ್ನು ಕೊಳ್ಳೆಹೊಡೆಯತ್ತಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸೆ.18ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಮಣಿಪಾಲದ ಟೈಗರ್ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ನಡೆಸುವ ಕಾಂಗ್ರೆಸ್, ಅಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನೆ್ಸ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಗೋಪಾಲ ಭಂಡಾರಿ, ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ. ಬಾವಾ ಸೇರಿದಂತೆ ಹಲವು ರಾಜ್ಯ ಹಾಗೂ ಜಿಲ್ಲಾ ಮುಖಂಡರು ಭಾಗವಹಿಲಿದ್ದಾರೆ ಎಂದು ತೋನ್ಸೆ ತಿಳಿಸಿದ್ದಾರೆ.