ಪೂರ್ಣಪ್ರಮಾಣದ ಹೆಬ್ರಿ ತಾಲೂಕು ಕಚೇರಿ ಆರಂಭಕ್ಕೆ ಮನವಿ
ಉಡುಪಿ, ಸೆ.16: ಹೆಬ್ರಿಯಲ್ಲಿ ಶೀಘ್ರವಾಗಿ ಪೂರ್ಣ ಪ್ರಮಾಣದ ತಾಲೂಕು ಕಛೇರಿ ಆರಂಭಿಸಿ ಖಾಯಂ ತಹಶೀಲ್ಧಾರ್ ನೇಮಕ ಮಾಡುವಂತೆ ಮಾಜಿ ಶಾಸಕ ಗೋಪಾಲ ಭಂಡಾರಿ ರವಿವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲರನ್ನು ಉಡುಪಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಸಚಿವೆ ಡಾ.ಜಯಮಾಲ, ಈ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕಂದಾಯ ಸಚಿವರು ಮತ್ತು ಸಂಸದ ಡಾ.ಎಂ.ವೀರಪ್ಪ ಮೊಯಿಲಿಯವರೊಂದಿಗೆ ಚರ್ಚಿಸಿ ಶೀಘ್ರ ಕ್ರಮಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯ್ಷ ನೀರೆ ಕೃಷ್ಣ ಶೆಟ್ಟಿ ಹಾಜರಿದ್ದರು.
Next Story