ಸೆ. 22: ತುಳು ಅಕಾಡಮಿಯ ಚಾವಡಿ ಸನ್ಮಾನ
ಮಂಗಳೂರು, ಸೆ.18: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ವತಿಯಿಂದ ಸೆ.22ರಂದು ಅಪರಾಹ್ನ 3:30ಕ್ಕೆ ಅಕಾಡಮಿಯ ಸಿರಿಚಾವಡಿಯಲ್ಲಿ ಸಾಹಿತಿ ಮತ್ತು ತುಳು ಲಿಪಿ ಶಿಕ್ಷಕ ಬಿ. ತಮ್ಮಯ್ಯ ಅವರನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ವಿದ್ವಾಂಸ ಏರ್ಯ ಲಕ್ಷ್ಮಿನಾರಾಯಣ ಆಳ್ವ, ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಟಿ. ಹೆಬ್ಬಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story