ಬಂಟ್ವಾಳ: ಭಾರತ್ ಬಂದ್ ವೇಳೆ ಹಲ್ಲೆ ಪ್ರಕರಣ; ಆರೋಪಿ ಸೆರೆ
ಬಂಟ್ವಾಳ, ಸೆ. 19: ಭಾರತ್ ಬಂದ್ ದಿನದಂದು ವಾಹನ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಮಾಣಿ ನಿವಾಸಿ ಜಗ್ಗ ಯಾನೆ ಜಗದೀಶ ಬಂಧಿತ ಆರೋಪಿ.
ಈತ ಭಾರತ್ ಬಂದ್ ದಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ಪಿಕಪ್ ಚಾಲಕನೋರ್ವನಲ್ಲಿ ಬಲವಂತವಾಗಿ ಸಂಚಾರ ಸ್ಥಗಿತಗೊಳಿಸುವಂತೆ ಹೇಳಿ, ಹಲ್ಲೆ ನಡೆಸಿದ್ದು, ಗಾಯಾಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಜಗದೀಶ್ನನ್ನು ಮಾಣಿ ಸಮೀಪದ ತೋಟದಲ್ಲಿ ವಶಕ್ಕೆ ಪಡೆದಿದ್ದು, ಮುಂದಿನ ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾ ಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story