ಭಾಸ್ಕರ್ ಶೆಟ್ಟಿ ಕೊಲೆ: ನಿರಂಜನ್ ಭಟ್ ಜಾಮೀನು ತಿರಸ್ಕೃತ
ಉಡುಪಿ, ಸೆ.19: ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ನಂದಳಿಕೆಯ ನಿರಂಜನ್ ಭಟ್ಗೆ ಸುಪ್ರೀಂ ಕೋರ್ಟ್ ಮಂಗಳ ವಾರ ಜಾಮೀನು ನಿರಾಕರಿಸಿದೆ.
ನಿರಂಜನ್ ಭಟ್ ಜಾಮೀನು ಕೋರಿ ಸಲ್ಲಿಸಿದ ಮೇಲ್ಮನವಿಯನ್ನು ವಜಾ ಗೊಳಿಸಿರುವ ಸುಪ್ರೀಂ ಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಎಸ್. ಎಸ್.ಎ.ಬೊಬಡೆ, ಪ್ರಕರಣದ 36 ಸಾಕ್ಷಗಳ ವಿಚಾರಣೆ ಪೂರ್ಣಗೊಂಡ ನಂತರ ಜಾಮೀನು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ನಿರಂಜನ್ ಭಟ್ ಈ ಹಿಂದೆ ಹೈಕೋರ್ಟ್ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ಹೈಕೋರ್ಟ್ 2017ರ ಜು.26ರಂದು ತಿರಸ್ಕರಿಸಿ ಆದೇಶ ನೀಡಿತ್ತು. ನಂತರ ಅವರು ಪ್ರಕರಣದ ವಿಚಾರಣೆಯ ವಿಳಂಬವನ್ನು ಮುಂದಿಟ್ಟುಕೊಂಡು 2018ರ ಮಾ.12ರಂದು ಜಾಮೀನು ನೀಡುವಂತೆ ಕೋರಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿ ದ್ದರು. ಆದರೆ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ ಈ ಅರ್ಜಿಯನ್ನು ಎಪ್ರಿಲ್ ತಿಂಗಳಲ್ಲಿ ವಜಾಗೊಳಿಸಿ ಆದೇಶ ನೀಡಿದ್ದರು.
Next Story