ದ.ಕ.ಜಿಲ್ಲಾ ಕಾಂಗ್ರೆಸ್ನಿಂದ ವೀಕ್ಷಕರು-ಸಹವೀಕ್ಷಕರ ನೇಮಕ
ಮಂಗಳೂರು, ಸೆ.19: ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯನ್ನಿಟ್ಟುಕೊಂಡು ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 8 ವಿಧಾನಸಭಾ ಕ್ಷೇತ್ರಕ್ಕೆ ವೀಕ್ಷಕರು ಹಾಗೂ ಪ್ರತಿ ಬ್ಲಾಕ್ ಸಮಿತಿಗಳಿಗೆ ಸಹ ವೀಕ್ಷಕರನ್ನು ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ನೇಮಕಗೊಳಿಸಿದ್ದಾರೆ ಎಂದು ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ತಿಳಿಸಿದ್ದಾರೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ವೆಂಕಪ್ಪ ಗೌಡ, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ಗೆ ಉಮ್ಮರ್ ಫಾರೂಕ್, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ಗೆ ವಿಜಯ್ ಕುಮಾರ್ ರೈ, ಮೂಡಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ಪ್ರಸಾದ್ರಾಜ್ ಕಾಂಚನ್, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ಗೆ ಬಿಲಾಲ್ ಮೊಯ್ದಿನ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ಗೆ ಸತೀಶ್ ಕೆಡಿಂಜೆ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ರಜನೀಶ್, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ಗೆ ಟಿ.ಕೆ.ಸುಧೀರ್, ಗುರುಪುರ ಬ್ಲಾಕ್ ಕಾಂಗ್ರೆಸ್ಗೆ ಅಬೂಬಕರ್ ಕುದ್ರೋಳಿ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಎಂ.ಎಸ್.ಮುಹಮ್ಮದ್, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ಗೆ ಬಿ.ಕೆ.ಇದಿನಬ್ಬ, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ಗೆ ರಾಜೇಶ್ ಕುಮಾರ್ ಬಾಳೆಕಲ್ಲು, ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಕೆ.ಕೆ. ಶಾಹುಲ್ ಹಮೀದ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ಗೆ ಮರಿಯಮ್ಮ ಥಾಮಸ್, ಮುಡಿಪು ಬ್ಲಾಕ್ ಕಾಂಗ್ರೆಸ್ಗೆ ನೀರಜ್ ಪಾಲ್, ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಮಮತಾ ಗಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ಗೆ ಟಿ. ಪ್ರವೀಣ್ಚಂದ್ರ ಆಳ್ವ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಬ್ದುಲ್ ರವೂಫ್, ಪುತ್ತೂರು ವಿಧಾನಸಭಾ ಕ್ಷೇತ್ರ ಧನಂಜಯ ಅಡ್ಪಂಗಾಯ, ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಶುಭೋದಯ ಆಳ್ವ, ವಿಟ್ಲ ಬ್ಲಾಕ್ ಕಾಂಗ್ರೆಸ್ಗೆ ಉಮ್ಮರ್ ಪಜೀರ್, ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಲೋಕೇಶ್ವರಿ ವಿನಯಚಂದ್ರ, ಸುಳ್ಯ ಬ್ಲಾಕ್ ಕಾಂಗ್ರೆಸ್ಗೆ ಉಲ್ಲಾಸ್ ಕೋಟ್ಯಾನ್, ಕಡಬ ಬ್ಲಾಕ್ ಕಾಂಗ್ರೆಸ್ಗೆ ರಾಜಶೇಖರ್ ನಾಕ್ ಅವರನ್ನು ನೇಮಿಸಲಾಗಿದೆ.