ಬಾಯಾರು ಅಬ್ದುಲ್ಲಾ ಮುಸ್ಲಿಯಾರ್ ನಿಧನ
ಮಂಗಳೂರು, ಸೆ.19: ಕಾಸರಗೋಡು ಜಿಲ್ಲಾ ಜಂ ಇಯ್ಯತುಲ್ ಉಲಮಾದ ಹಿರಿಯ ನಾಯಕ, ವಿದ್ವಾಂಸ, ಪ್ರಭಾಷಣಗಾರ ಎ.ಪಿ. ಅಬ್ದುಲ್ಲಾ ಮುಸ್ಲಿಯಾರ್ ಬಾಯಾರು (75) ಬುಧವಾರ ನಿಧನ ಹೊಂದಿದರು.
ಮನೆಯಲ್ಲಿ ನಮಾಝ್ ಮಾಡುತ್ತಿದ್ದ ವೇಳೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಹಲವು ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಅಬ್ದುಲ್ಲಾ ಮುಸ್ಲಿಯಾರ್ ಅನೇಕ ಮಸೀದಿಗಳಲ್ಲಿ ಖತೀಬರಾಗಿ, ಮುದರ್ರಿಸರಾಗಿ ಸೇವೆ ಸಲ್ಲಿಸಿದ್ದರು.
ಎಸ್ವೈಎಸ್ ಸ್ಥಳೀಯ ಘಟಕದ ಅಧ್ಯಕ್ಷರಾಗಿ, ಕಾಸರಗೋಡು ಜಿಲ್ಲಾ ಉಪಾಧ್ಯಕ್ಷರಾಗಿ, ಸಮಸ್ತ ಮಂಜೇಶ್ವರ ತಾಲೂಕು ಸಮಿತಿಯ ಅಧ್ಯಕ್ಷರಾಗಿ, ಬಾಯಾರು ಮುಜಮ್ಮಹ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮುಹಿಮ್ಮಾತ್ ಸಂಘಟನೆಯ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಮೃತರು ಪತ್ನಿ ಮತ್ತು ಐವರು ಪುತ್ರರು ಹಾಗೂ ಇಬ್ಬರು ಪುತ್ರಿಯರ ಸಹಿತ ಅಪಾರ ಕುಟುಂಬಸ್ಥರು, ಅಭಿಮಾನಿ, ಶಿಷ್ಯ ವರ್ಗವನ್ನು ಅಗಲಿದ್ದಾರೆ.
Next Story