ಬಂಟ್ವಾಳ : ನೇಣು ಬಿಗಿದು ಯುವಕ ಆತ್ಮಹತ್ಯೆ
ಬಂಟ್ವಾಳ, ಸೆ. 20: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಸಮೀಪದ ಅನಂತಾಡಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಅನಂತಾಡಿ ಗ್ರಾಮದ ದೇವಿನಗರ ನಿವಾಸಿ ಅಶೋಕ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ.
ಕೂಲಿಕೆಲಸ ಮಾಡುತ್ತಿದ್ದ ಈತ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಶಂಕಿಸಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story