ಸೆ.22: ಕೃಷ್ಣಾಪುರದಲ್ಲಿ ಥ್ರೋಬಾಲ್ ಪಂದ್ಯಾಟ
ಮಂಗಳೂರು, ಸೆ.20: ದ.ಕ.ಜಿಪಂ ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕೃಷ್ಣಾಪುರ ಅಲ್ ಬದ್ರಿಯಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸೆ.22ರಂದು ಕೃಷ್ಣಾಪುರ 7ನೆ ಬ್ಲಾಕ್ನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ದ.ಕ.ಜಿಲ್ಳಾ ಮಟ್ಟದ ಥ್ರೋಬಾಲ್ ಪಂದ್ಯಾಟ ಜರುಗಲಿದೆ.
ಅಂದು ಬೆಳಗ್ಗೆ 9:30ಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಪಂದ್ಯಾಟಕ್ಕೆ ಚಾಲನೆ ನೀಡಲಿದ್ದು, ಶಾಸಕ ಡಾ. ವೈ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಪ್ರಶಸ್ತಿ ಪ್ರದಾನ ಮತ್ತು ಸಮಾರೋಪ ಸಮಾರಂಭ ಜರುಗಲಿದ್ದು, ಕೃಷ್ಣಾಪುರ ಅಲ್ ಬದ್ರಿಯಾ ಎಜುಕೇಶನಲ್ ಎಸೋಸಿಯೇಶನ್ನ ಅಧ್ಯಕ್ಷ ಬಿ.ಎ. ನಝೀರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story