ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ : ಸೆ.23ರಂದು ಉಚಿತ ವೈದ್ಯಕೀಯ ಶಿಬಿರ
ಬಂಟ್ವಾಳ, ಸೆ. 21: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಇದರ ಬಂಟ್ವಾಳ ವಲಯ ಹಾಗೂ ಯೇನಪೋಯ ಸ್ಪೆಶಾಲಿಟಿ ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಸೆ. 23ರಂದು ಬೆಳಿಗ್ಗೆ 9ಕ್ಕೆ ಉಚಿತ ವೈದ್ಯಕೀಯ ಶಿಬಿರವು ಬಿ.ಸಿ.ರೋಡಿನ ಗಾಣದಪಡ್ಪುವಿನ ನಾರಾಯಣ ಗುರು ಸಭಾಭವನದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಬಿ.ವಿಶ್ವನಾಥ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸದಾಶಿವ ಶಿಬಿರ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕ ಟಿ.ಡಿ.ನಾಗಾರಜ್, ಗ್ಯಾರೇಜು ಮಾಲಕರ ಸಂಘದ ಜಿಲ್ಲಾಧ್ಯಕ್ಷ ದಿವಾಕರ, ಯೇನೆಪೋಯ ಮೆಡಿಕಲ್ ಕಾಲೇಜಿನ ಸಮಾಜಕಾರ್ಯ ವಿಭಾಗದ ಡಾ. ಮುಹಮ್ಮದ್ ಗುತ್ತಿಗಾರು ಭಾಗವಹಿಸಲಿದ್ದಾರೆ.
ಈ ವೈದ್ಯಕೀಯ ಶಿಬಿರದಲ್ಲಿ ಎಲುಬು, ಕೀಲು, ಕಿವಿ, ಗಂಟಲು, ಮೂಗು, ನೇತ್ರ ವಿಭಾಗದ ಚಿಕಿತ್ಸೆಗಳಿಗೆ ಮಾರ್ಗದರ್ಶನ ಲಭ್ಯವಿದೆ. ಯೇನೆಪೋಯ ಸ್ಪೆಶಾಲಿಟಿ ಆಸ್ಪತ್ರೆಯ ಹೆಲ್ತ್ ಕಾರ್ಡ್ ಮಾಡಲಿಚ್ಛಿಸುವ ಫಲಾನುಭವಿಗಳು ತನ್ನ ಆಧಾರ್ ಕಾರ್ಡ್, ರೇಶನ್ ಕಾರ್ಡ್ ಹಾಗೂ 1 ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ನೀಡಿ ನಿಂದಾಯಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.