ಬೆಳ್ತಂಗಡಿ: ಸ್ನಾನಕ್ಕೆ ತೆರಳಿದ್ದ ಯುವಕ ಕೆರೆನೀರಿನಲ್ಲಿ ಮುಳುಗಿ ಮೃತ್ಯು
ಬೆಳ್ತಂಗಡಿ,ಸೆ.21: ಗೆಳೆಯರೊಂದಿಗೆ ಕೆರೆಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.
ಮೃತ ಯುವಕ ಮಡಂತ್ಯಾರು ಸಮೀಪ ಬಂಗೇರಕಟ್ಟೆ ನಿವಾಸಿ ಸಿರಾಜುದ್ದೀನ್ ಎಂಬವರ ಪುತ್ರ ಇಮ್ರಾನ್ (24) ಎಂದು ಗುರುತಿಸಲಾಗಿದೆ.
ಇಂಜಿನಿಯರಿಂಗ್ ಶಿಕ್ಷಣ ಮುಗಿಸಿ ಬಂದಿರುವ ಇಮ್ರಾನ್ ಗುತ್ತಿಗೆ ದಾರರಾಗಿರುವ ತನ್ನ ತಂದೆಯೊಂದಿಗೆ ಕೆಲಸ ಮಾಡುತ್ತಿದ್ದರು. ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story