ರಸ್ತೆ ಅಪಘಾತ: ಗಾಯಾಳು ಮೃತ್ಯು
ಕುಂದಾಪುರ, ಸೆ.21: ರಸ್ತೆ ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ಕೋಣಿ ಗ್ರಾಮದ ತಿಮ್ಮಪ್ಪಪೂಜಾರಿ(54) ಎಂಬವರು ಸೆ.20ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ.
ಇವರು 2017ರ ನ.20ರಂದು ಕೊಟೇಶ್ವರ ಸರ್ಜನ್ ಆಸ್ಪತ್ರೆಯ ಎದುರು ರಾ.ಹೆ.66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ಈ ಕುರಿತು ಇವರು ಚಿಕಿತ್ಸೆ ಪಡೆದುಕೊಂಡಿದ್ದರೂ ಸಂಪೂರ್ಣವಾಗಿ ಗುಣ ಮುಖವಾಗಿರಲಿಲ್ಲ. ಇತ್ತೀಚೆಗೆ ಇವರ ಗಾಯಗಳು ಉಲ್ಬಣಗೊಂಡಿದ್ದು, ಇದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story