ವಿಷ್ಣುನಾಥನ್ ಇಂದು ಉಡುಪಿಗೆ
ಉಡುಪಿ, ಸೆ.23: ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿಗಳಲ್ಲಿ ಒಬ್ಬರಾಗಿರುವ ಪಿ.ಸಿ.ವಿಷ್ಣುನಾಥನ್ ಸೆ.24ರಂದು ಅಪರಾಹ್ನ 2:30ಕ್ಕೆ ಉಡುಪಿಯ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿದ್ದಾರೆ.
ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ನ ಪ್ರಕಟನೆ ತಿಳಿಸಿದೆ.
Next Story