ಅ.6ಕ್ಕೆ ಪುತ್ತೂರಿನಲ್ಲಿ ಜನ ಸ್ಪಂಧನ ಸಭೆ
ಪುತ್ತೂರು,ಸೆ.25: ಸಾರ್ವಜನಿಕರ ಸಮಸ್ಯೆಗಳ ತುರ್ತು ನಿವಾರಣೆಯ ನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ಜನ ಸ್ಪಂಧನ ಸಭೆಯನ್ನು ನಡೆಸಲಾಗುತ್ತಿದ್ದು, ಜಿಲ್ಲಾಧಿಕಾರಿಗಳ ಆದೇಶದಂತೆ ಅ.6ರಂದು ಪುತ್ತೂರಿನಲ್ಲಿ ಜನ ಸ್ಪಂಧನ ಸಭೆ ನಡೆಸಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ತಿಳಿಸಿದ್ದಾರೆ.
ಇಲ್ಲಿನ ನಾರಾಯಣ ಗುರು ಸಭಾಭವನದಲ್ಲಿ ತಾಲೂಕು ಮಟ್ಟದ ಜನ ಸ್ಪಂಧನ ಸಭೆ ನಡೆಯಲಿದ್ದು, ಜಿಲ್ಲಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿರುವರು.
ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ
Next Story