ಟೈಮ್ ಕೀಪರ್ ಮೇಲೆ ದಾಳಿ ಪ್ರಕರಣ: ತನಿಖೆ ಚುರುಕು
ಮಂಗಳೂರು, ಸೆ.25: ಸೂರಲ್ಪಾಡಿ ಮಸೀದಿ ಬಳಿ ಸೋಮವಾರ ನಡೆದ ಟೈಮ್ ಕೀಪರ್ ಸೂರಲ್ಪಾಡಿ ನಿವಾಸಿ ಹರೀಶ್ ಶೆಟ್ಟಿ (39) ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಬಜಪೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಸೋಮವಾರ ಸಂಜೆ ಇವರು ಕೆಲಸ ಮುಗಿಸಿ ಮನೆಗೆ ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭ ಇನ್ನೊಂದು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಕೈಗೆ ಮತ್ತು ಕುತ್ತಿಗೆಗೆ ಗಾಯಗೊಂಡ ಹರೀಶ್ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಗ್ಗೆ ಶೋಧ ಕಾರ್ಯ ಮುಂದುವರಿದಿದೆ. ಬಜಪೆ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ದುಷ್ಕೃತ್ಯಗಳಲ್ಲಿ ಗುರುತಿಸಿಕೊಂಡ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಇದು ಮಾತ್ರವಲ್ಲದೆ ಈ ವ್ಯಾಪ್ತಿಯಲ್ಲಿ ಯಾವುದೇ ಸಿಸಿಟಿವಿಗಳಲ್ಲಿ ಆರೋಪಿಗಳ ಸುಳಿವು ಸಿಗಬಹುದೆಂಬ ಎಂಬ ನಿಟ್ಟಿನಲ್ಲಿಯೂ ಪರಿಶೀಲನೆ ನಡೆಯುತ್ತಿದೆ.
Next Story