ಅರಸು ಕಲ್ಪನೆಯ ಸಮಾಜ ನಿರ್ಮಾಣವಾಗಲಿ: ದಿನಕರ ಬಾಬು
ಉಡುಪಿ, ಸೆ.27: ಡಿ.ದೇವರಾಜ ಅರಸು ಕಲ್ಪನೆಯ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾಯೋನ್ಮುಖ ರಾಗಬೇಕು ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಹಿಂದುಳಿದ ವರ್ಗ ಗಳ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಬನ್ನಂಜೆಯ ಶಿವಗಿರಿ ಸಭಾಭವನದಲ್ಲಿ ಗುರುವಾರ ಆಯೋಜಿಸಲಾದ ಹಿಂದುಳಿದ ವರ್ಗಗಳ ನಾಯಕ, ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿ ದಿ.ಡಿ.ದೇವರಾಜ ಅರಸು ಅವರ 103ನೆ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಜಾರಿಗೆ ತಂದ ಹಲವು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ನಾವು ವಿಫಲರಾಗಿದ್ದೇವೆ. ಈ ಯೋಜನೆಗಳನ್ನು ಜನಸಾಮಾನ್ಯ ರಿಗೆ ತಲುಪಿಸುವ ಮೂಲಕ ಅರಸು ಕಲ್ಪನೆಯ ಸಮಾಜ ನಿರ್ಮಾಣ ಮಾಡ ಬೇಕು. ಇದು ಎಲ್ಲಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಕರ್ತವ್ಯವಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮಾತನಾಡಿ, ಅರಸು ಜಾರಿಗೆ ತಂದ ಭೂಸುಧಾರಣಾ ಕಾಯಿದೆಯಿಂದ ಅನೇಕ ಮಂದಿ ಭೂರಹಿತರು ಭೂಮಿ ಹಾಗೂ ಮೀಸಲಾತಿಯಿಂದ ಹಲವು ಹಿಂದು ಳಿದ ವರ್ಗದವರು ಉನ್ನತ ಹುದೆಗಳನ್ನು ಪಡೆಯುವಂತಾಗಿದೆ. ಅರಸು ಅವರ ವ್ಯಕ್ತಿತ್ವ, ಸರಳ ಜೀವನ ಹಾಗೂ ಆದರ್ಶಗಳು ಸದಾ ಅನುಕರಣೀಯ ಎಂದು ತಿಳಿಸಿದರು.
ಡಿ.ದೇವರಾಜ ಅರಸು ಕುರಿತು ವಿಶೇಷ ಉಪನ್ಯಾಸ ನೀಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕುದಿ ವಸಂತ ಶೆಟ್ಟಿ, ಜನ ಸಾಮಾನ್ಯರಿಗೂ ಅಧಿಕಾರ ನೀಡಿ ಅದ್ವಿತೀಯ ಸಾಧನೆ ಮಾಡಿದ ಅರಸು, ಬದಲಾವಣೆಯ ಹರಿಕಾರರು. ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಅಭಿವೃದ್ದಿಗಾಗಿ ಯೋಜನೆ ರೂಪಿಸಿ ಜಾರಿಗೆ ತಂದರು. ಕರ್ನಾಟಕದ ಇತಿಹಾಸದಲ್ಲಿ ವಿನೂತನ ಕ್ರಾಂತಿ ಮಾಡಿದ ಅವಿಸ್ಮರಣೀಯ ನಾಯಕ ಎಂದು ಹೇಳಿದರು.
ಅಧ್ಯಕ್ಷತೆಯನ್ನು ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ವಹಿಸಿ ದ್ದರು. ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸಿಬ್ಬಂದಿಗಳನ್ನು, ಮಂಗಳೂರು ವಿವಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿನಿಯನ್ನು, ಎಸೆಸೆಲ್ಸಿ ಮತ್ತು ಪಿಯುಸಿ ಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಸ್ಪರ್ಧೆಗಳ ವಿಜೇತರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಲಮಾಣಿ ಸ್ವಾಗತಿಸಿದರು. ವಿಸ್ತರಣಾಧಿಕಾರಿ ದಯಾನಂದ ಕಾರ್ಯಕ್ರಮ ನಿರೂಪಿಸಿದರು.