ವಡಬಾಂಡೇಶ್ವರದಲ್ಲಿ ಮಧ್ವಾಚಾರ್ಯ, ಸೈಂಟ್ ಮೇರಿಸ್ನಲ್ಲಿ ಪರಶುರಾಮ ಮೂರ್ತಿ ಸ್ಥಾಪನೆ: ರಘುಪತಿ ಭಟ್ ಇಂಗಿತ
ಉಡುಪಿ, ಸೆ. 27: ಸಿಆರ್ಝೆಡ್ ಕಾನೂನು ಸರಳೀಕರಣಗೊಂಡ ಬಳಿಕ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಮಲ್ಪೆ ವಡಬಾಂಡೇಶ್ವರದಲ್ಲಿ ಮಧ್ವಾಚಾರ್ಯರ ಮೂರ್ತಿ ಮತ್ತು ಸೈಂಟ್ ಮೇರಿಸ್ ದ್ವೀಪದಲ್ಲಿ ಪರಶು ರಾಮ ಮೂರ್ತಿಯನ್ನು ಸ್ಥಾಪಿಸುವ ಬಗ್ಗೆ ಯೋಜನೆ ರೂಪಿಸಬೇಕು. ಇದರಿಂದ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ದಿಪಡಿಸಲು ಸಾಧ್ಯವಾಗುತ್ತದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಲ್ಪೆ ಅಭಿವೃದ್ಧಿ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನೆಹರು ಯುವ ಕೇಂದ್ರ, ಕರಾವಳಿ ಪ್ರವಾಸೋದ್ಯಮಗಳ ಸಂಘಟನೆ, ನಿರ್ಮಿತಿ ಕೇಂದ್ರ, ಅತಿಥಿ ಕೌಶಲ್ಯ ಕೇಂದ್ರ ಮಣಿಪಾಲ ಇವುಗಳ ಸಹಯೋಗ ದಲ್ಲಿ ಮಲ್ಪೆ ಬೀಚ್ನಲ್ಲಿ ಗುರುವಾರ ನಡೆದ ಪರ್ಯಟನ ಪರ್ವ ಹಾಗೂ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯಲ್ಲಿ ಹಲವು ಬೀಚ್ಗಳ ಕುರಿತು ಪ್ರವಾಸಿಗರಿಗೆ ಮಾಹಿತಿ ಇಲ್ಲ. ಅಂತಹ ಬೀಚ್ಗಳನ್ನು ಗುರುತಿಸಿ ಅಭಿವೃದ್ದಿಪಡಿಸಬೇಕಾಗಿದೆ. ಪಡುಕೆರೆ ಬೀಚ್ ನಲ್ಲಿ ಹೋಂ ಸ್ಟೇಗಳನ್ನು ಪ್ರಾರಂಭಿಸುವದರ ಮೂಲಕ ಸ್ಥಳಿಯರಿಗೆ ಉದ್ಯೋಗ ವಕಾಶ ಒದಗಿಸಬಹುದಾಗಿದೆ. ಪ್ರವಾಸಿ ತಾಣಗಳನ್ನು ಅಭಿವೃದ್ದಿಪಡಿಸುವಾಗ ಸ್ಥಳೀಯ ಜನತೆಯ ಸಹಕಾ ಪಡೆಯುವುದು ಅಗತ್ಯ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಪಂ ಅಧ್ಯಕ್ಷ ದಿನಕರ ಬಾಬು ಮಾತ ನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕ ವಾತಾವರಣವಿದೆ. ಆದರೆ ಅವುಗಳನ್ನು ಸರಿಯಾಗಿ ಬಳಸಿಕೊಳ್ಳುವಲ್ಲಿ ವಿಫಲರಾಗಿದ್ದೇವೆ. ಜಿಲ್ಲೆಯ ಪ್ರವಾಸೋಧ್ದಯಮ ಅಭಿವೃದ್ದಿಯಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರ್ಗಿ ಮಾತನಾಡಿ, ಪ್ರವಾ ಸೋದ್ಯಮ ಬೆಳವಣಿಗೆಯಿಂದ ಆ ಪ್ರದೇಶದ ಜನತೆಯ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಬೆಳವಣಿಗೆ ಸಾಧ್ಯವಾಗುತ್ತದೆ. ಉಡುಪಿ ಜಿಲ್ಲೆಯ ಲ್ಲಿನ ವೈವಿದ್ಯತೆ, ಸಾಂಪ್ರದಾಯಿಕ ಕಲೆ ಮತ್ತು ಸಂಸ್ಕೃತಿಯ ಮೂಲಕ ಪ್ರವಾಸಿಗ ರನ್ನು ಆಕರ್ಷಿಸಲು ಸಾಧ್ಯ ಎಂದು ಹೇಳಿದರು.
ದಿ ಬೆಸ್ಟ್ ಆಪ್ ಉಡುಪಿ ಇನ್ 48 ಹೌವರ್ಸ್ ಕಿರುಪುಸ್ತಕವನ್ನು ದ.ಕ ಉಡುಪಿ ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಬಿಡುಗಡೆ ಗೊಳಿಸಿದರು. ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ನಗರಸಭೆ ಸದಸ್ಯೆ ಲಕ್ಷ್ಮೀ ಮಂಜು ಕೊಳ, ಕುಂದಾಪುರ ಉಪ ವಿಭಾಗಾಧಿಕಾರಿ ಭೂಬಾಲನ್, ಪೌರಾಯುಕ್ತ ಜನಾರ್ದನ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ಪ್ಯಾರಾ ವಾಲಿಬಾಲ್ ಸಂಸ್ಥೆಯ ಚಂದ್ರಶೇಖರ್, ಎಸಿಟಿಯ ಮನೋಹರ ಶೆಟ್ಟಿ ಉಪಸ್ಥಿತರಿದ್ದರು.
ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ವಿಜಯೇಂದ್ರ ಕಾರ್ಯಕ್ರಮ ನಿರೂಪಿಸಿದರು.