ಉಡುಪಿ: ಸೆ.30ರಂದು ಪೌರಕಾರ್ಮಿಕರಿಗೆ ಸನ್ಮಾನ
ಉಡುಪಿ, ಸೆ.28: ಉಡುಪಿ ಜಿಲ್ಲಾ ಪೌರ ಕಾರ್ಮಿಕರ ಸಂಘಟನೆಗಳ ಒಕ್ಕೂಟದ ಉದ್ಘಾಟನೆ ಹಾಗೂ ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಹಿರಿಯ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಸನ್ಮಾನ ಕಾರ್ಯಕ್ರಮ ಸೆ.30ರ ರವಿವಾರ ಅಪರಾಹ್ನ 3:00ಕ್ಕೆ ಆದಿಉಡುಪಿಯ ಅಂಬೇಡ್ಕರ್ ಭವನ ದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ನಾಗರಾಜ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರು ರಾಷ್ಟ್ರೀಯ ಕಾನೂನು ಶಾಲೆಯ ತಳ ಸಮುದಾಯ ಅಧ್ಯಯನ ಕೇಂದ್ರದ ಸಂಶೋಧಕರಾದ ಡಾ.ಆರ್.ವಿ.ಚಂದ್ರ ಶೇಖರ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕರ್ನಾಟಕ ಸಭಾಯಿ ಕಮರ್ರ್ಚಾರಿ ಕಾವಲು ಸಮಿತಿಯ ರಾಜ್ಯ ಸಂಚಾಲಕ ಕೆ.ಬಿ.ಓಬಳೇಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭುಜಬಲಿ, ಜಿಲ್ಲಾ ಕಾರ್ಮಿಕರ ನಿರೀಕ್ಷಕ ರಾಮಮೂರ್ತಿ ಎಸ್.ಎಸ್. ಹಾಗೂ ಪೌರಾಯುಕ್ತ ಜನಾರ್ದನ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪೌರ ಕಾರ್ಮಿಕ ಸಂಘದ ಪ್ರಕಟಣೆ ತಿಳಿಸಿದೆ.
Next Story