ಬಂಟ್ವಾಳ: ನಾಲ್ವರು ಶಿಕ್ಷಕರಿಗೆ ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪ್ರದಾನ
ಬಂಟ್ವಾಳ, ಸೆ. 29: ಮೂಲಭೂತ ಶಿಕ್ಷಣ ಹಾಗೂ ಸಾಕ್ಷರತಾ ಮಾಸಾಚರಣೆಯ ಅಂಗವಾಗಿ ಬಂಟ್ವಾಳ ರೋಟರಿ ಕ್ಲಬ್ ವತಿಯಿಂದ ಶನಿವಾರ ನಾಲ್ಕು ಮಂದಿ ಶಿಕ್ಷಕರಿಗೆ ರಾಷ್ಟ್ರ ನಿರ್ಮಾತೃ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಶಿಕ್ಷಕರಾದ ಎಸ್ವಿಎಸ್ ಪ್ರೌಢಶಾಲೆಯ ಶಿವಾನಂದ ಬಾಳಿಗ, ಬೆಂಜನಪದವು ಪಿಯು ಕಾಲೇಜಿನ ರವಿಚಂದ್ರ ಮಯ್ಯ, ಬೆಂಜನಪದವು ಪ್ರೌಢಶಾಲೆಯ ಹೇಮಾ ಮಯ್ಯ, ಎಸ್ವಿಎಸ್ ದೇವಾಳ ಆಂಗ್ಲ ಮಾಧ್ಯಮ ಶಾಲೆಯ ರೋಶನಿ ತಾರಾ ಡಿಸೋಜಾ ಅವರಿಗೆ ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭ ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಕಾರ್ಯದರ್ಶಿ ಶಿವಾನಿ ಬಾಳಿಗ, ಪೂರ್ವಾಧ್ಯಕ್ಷ ರಿತೇಶ್ ಬಾಳಿಗ, ಶಿಕ್ಷಕ ವಿಠಲನಾಯಕ್ ಮೊದಲಾದವರು ಉಪಸ್ಥಿತರಿದ್ದರು.
Next Story