ಮಂಗಳೂರು: ವಿಕಾಸ್ ಕಾಲೇಜಿನಲ್ಲಿ ಗಾಂಧೀಜಿ ಜನ್ಮ ದಿನಾಚರಣೆ
ಮಂಗಳೂರು, ಅ. 2: ನಗರದ ವಿಕಾಸ್ ಪದವಿಪೂರ್ವ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಯನ್ನು ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವನ್ನು ಕೈಗೊಳ್ಳುವುದರ ಮೂಲಕ ಆಚರಿಸಲಾಯಿತು.
ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು “ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸುವುದರ ಜೊತೆಗೆ ಅವರು ಹಾಕಿಕೊಟ್ಟ ಮೌಲ್ಯಗಳನ್ನು ಪ್ರತಿದಿನವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.”
ಮಾಜಿ ಸಚಿವರು ಹಾಗೂ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೃಷ್ಣ ಜೆ ಪಾಲೆಮಾರ್ ಮಾತನಾಡುತ್ತಾ, ನಮ್ಮ ಪ್ರಧಾನ ಮಂತ್ರಿಯವರ ಸ್ವಚ್ಛ ಭಾರತ ಪರಿಕಲ್ಪನೆಯ ಪ್ರಾಮುಖ್ಯತೆಯನ್ನು ವಿಕಾಸ್ ಕಾಲೇಜಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಮನವರಿಕೆ ಮಾಡುತ್ತಿದ್ದೇವೆ. ಪ್ರಸ್ತುತ ದಿನಗಳಲ್ಲಿ ಪರಿಸರವನ್ನು ಉಳಿಸಿ ಬೆಳೆಸುವ ಆವಶ್ಯಕತೆ ಇದೆ ಎಂದರು.
ವಿಕಾಸ್ ಎಜ್ಯುಕೇಷನ್ ಟ್ರಸ್ಟ್ ನ ಟ್ರಸ್ಟಿಗಳಾದ ಜೆ.ಕೊರಗಪ್ಪ, ಸೂರಜ್ ಕಲ್ಯ, ವಿಕಾಸ್ ಎಜ್ಯು ಸೊಲ್ಯುಷನ್ ನಿರ್ದೇಶಕ ಡಾ. ಅನಂತ್ಪ್ರಭು ಜಿ., ವಿಕಾಸ್ ವಿದ್ಯಾಸಂಸ್ಥೆಯ ಸಮನ್ವಯಾಧಿಕಾರಿ ಪಾರ್ಥಸಾರಥಿ ಜೆ ಪಾಲೆಮಾರ್, ಕೌನ್ಸೆಲರ್ ಡಾ ಮಂಜುಳಾ ರಾವ್, ಪ್ರಾಂಶುಪಾಲರಾದ ಪ್ರೊ. ಟಿ. ರಾಜಾರಾಮ್ ರಾವ್, ಕಾಮರ್ಸ್ ಇನ್ಚಾರ್ಜ್ ಐಶ್ವರ್ಯ ರಾವ್ ಉಪಸ್ಥಿತರಿದ್ದರು.
ವಿಕಾಸ್ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಂಡರು.