ಪುತ್ತೂರು: ಎಸ್ಕೆಎಸ್ಸೆಸ್ಸೆಫ್ 'ವಿಖಾಯ' ಸಂಘಟನೆಯಿಂದ ಸ್ವಚ್ಛತಾ ಕಾರ್ಯಕ್ರಮ
ಪುತ್ತೂರು, ಅ. 2: ಎಸ್ಕೆಎಸ್ಸೆಸ್ಸೆಫ್ ನ `ವಿಖಾಯ' ಸಂಘಟನೆಯ ವತಿಯಿಂದ ಮಂಗಳವಾರ ಪುತ್ತೂರು ಸರ್ಕಾರಿ ಆಸ್ಪತ್ರೆಯ ಪರಿಸರದ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು. ಸುಮಾರು 50ಕ್ಕೂ ಅಧಿಕ ಮಂದಿ ವಿಖಾಯ ಸಂಘಟನೆಯ ಕಾರ್ಯಕರ್ತರು ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಸ್ಪತ್ರೆ ಹೊರ ಆವರಣವನ್ನು ಸ್ವಚ್ಛಗೊಳಿಸಿದರು.
ಈ ಸಂದರ್ಭದಲ್ಲಿ ಎಸ್ಕೆಎಸ್ಸೆಸ್ಸೆಫ್ ವಲಯ ಅಧ್ಯಕ್ಷ ತಾಜುದ್ದೀನ್ ರಹ್ಮಾನಿ, ವಿಖಾಯ ಸಂಚಾಲಕ ಮನ್ಸೂರು ಮೌಲವಿ, ವಿಖಾಯ ಅಧ್ಯಕ್ಷ ಸಿದ್ಧೀಕ್ ಸುಲ್ತಾನ್, ವಲಯ ಕೋಶಾಧಿಕಾರಿ ಅಶ್ರಫ್ ಮುಕ್ವೆ, ಸಂಘಟನಾ ಕಾರ್ಯದರ್ಶಿ ಜಾಬಿರ್ ಫೈಝಿ ಬನಾರಿ ಶಂಸುಲ್ ಉಲಾಮಾ ಸೋಷಿಯಲ್ ಟ್ರಸ್ಟ್ ಕಾರ್ಯದರ್ಶಿ ಅಬೂಬಕ್ಕರ್ ಮುಲಾರು ಮತ್ತಿತರರು ಉಪಸ್ಥಿತರಿದ್ದರು.
Next Story