ಅ.4: ಉಡುಪಿಯಲ್ಲಿ ಎಸ್ಸೆಸ್ಸೆಫ್ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್
ಬಂಟ್ವಾಳ, ಅ. 3: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಅ.4ರಂದು ಮಧ್ಯಾಹ್ನ 2ಗಂಟೆಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಕ್ರೀಯ ಕಾರ್ಯಕರ್ತರಿಗಾಗಿ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಉಡುಪಿ- ಮೂಳೂರಿನ ಖಾಝಿ ಭವನದಲ್ಲಿ ನಡೆಯಲಿದೆ.
ಉಡುಪಿ ಜಲ್ಲಾಧ್ಯಕ್ಷ ಆಶ್ರಫ್ ರಝಾ ಅಂಜದಿ ಪಕ್ಷಿಕೆರೆ ಅಧ್ಯಕ್ಷತೆ ವಹಿಸುವರು. ಮೂಳೂರು ಜುಮಾ ಮಸ್ಜಿದ್ ಮುದರಿಸ್ ಬಿ.ಕೆ.ಅಬ್ದುಲ್ ರಹ್ಮಾನ್ ಮದನಿ ದುಆ: ನೆರವೇರಿಸಲಿದ್ದಾರೆ. ಇಹ್ಸಾನ್ ಕರ್ನಾಟಕ ಕನ್ವೀನರ್ ಅಬ್ದುಲ್ ರಹಿಮಾನ್ ರಝ್ವಿ ಕಲ್ಕಟ್ ಉದ್ಘಾಟಿಸುವರು. ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ಹಾಗೂ ರಾಜ್ಯ ಕೋಶಾಧಿಕಾರಿ ಶರೀಫ್ ಮಾಸ್ಟರ್ ಬೆಂಗಳೂರು ತರಗತಿಯನ್ನು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವಕೇಟ್ ಇಲ್ಯಾಸ್ ನಾವುಂದ, ರಾಜ್ಯ ನಾಯಕರಾದ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು, ರವೂಫ್ ಖಾನ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಮುಖಂಡ ಇಸ್ಮಾಯಿಲ್ ಮಾಸ್ಟರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.