ಮಂಗಳೂರು: ಮುಂದುವರಿದ ಹಿಂಗಾರು ಮಳೆ ಆರ್ಭಟ
ಮಂಗಳೂರು, ಅ.4: ದ.ಕ. ಜಿಲ್ಲೆಯ ವಿವಿಧೆಡೆ ಸಂಜೆ ವೇಳೆ ಗಂಟೆಗೂ ಹೆಚ್ಚು ಕಾಲ ಭಾರೀ ಗುಡುಗು, ಸಿಡಿಲು ಸಹಿತ ಮಳೆ ಸುರಿಯುವ ಮೂಲಕ ಹಿಂಗಾರು ಮಳೆ ಆರ್ಭಟಿಸುತ್ತಿದೆ.
ಅ. 6ರಿಂದ 8ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಂಭವವಿರುವುದರಿಂದ ಎಲ್ಲ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಬಾರದು. ಮೀನುಗಾರಿಕೆಗೆ ತೆರಳಿರುವ ಎಲ್ಲ ಮೀನುಗಾರಿಕೆ ದೋಣಿಗಳು ಅ. 5ರೊಳಗೆ ದಡ ಸೇರುವಂತೆ ಈ ಮೂಲಕ ಎಲ್ಲ ಮೀನುಗಾರರಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
Next Story