ಮಂಗಳೂರು: ರಥಬೀದಿಯ ಕಾಲೇಜಿನಲ್ಲಿ ಸ್ವಚ್ಛತಾ ಕಾರ್ಯಕ್ರಮ
ಮಂಗಳೂರು, ಅ.5: ಗಾಂಧಿ ಜಯಂತಿ ಅಂಗವಾಗಿ ನಗರದ ರಥಬೀದಿಯ ಡಾ. ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ ಹಾಗೂ ಸ್ವಚ್ಚತ ಕಾರ್ಯಕ್ರಮ ನಡೆಯಿತು. ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ಘಟಕವು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಘಟಕದ ವಿದ್ಯಾರ್ಥಿಗಳು ರಥಬೀದಿಯ ಹೆಣ್ಮ್ಮಕ್ಕಳ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಚ್ಚತಾ ಅಭಿಯಾನ ನಡೆಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜಶೇಖರ್ ಹೆಬ್ಬಾರ್ ಸಿ. ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಎನ್ನೆಎಸ್ಸೆಸ್ಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಈ ಸಂದರ್ಭ ಆ ಬಳಿಕ ಜರುಗಿದ ಸರ್ವಧರ್ಮ ಪ್ರಾರ್ಥನೆ ಕಾರ್ಯಕ್ರಮವನ್ನು ರೋವರ್ಸ್ ನಿರ್ದೇಶಕ ಪ್ರೊ. ಪುರುಷೋತ್ತಮ ಭಟ್ ನೆರವೇರಿಸಿದರು. ರೇಂಜರ್ಸ್ ನಿರ್ದೇಶಕರಾದ ಡಾ. ಶೈಲಾರಾಣಿ ಬಿ. ಹಾಗೂ ಪ್ರಣವ್ಯ ಸಹಕರಿಸಿದರು.
Next Story