ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷರಾಗಿ ಎಲ್.ಟಿ.ರಝಾಕ್ ಹಾಜಿ ಆಯ್ಕೆ
ಪುತ್ತೂರು, ಅ.6: ಪುತ್ತೂರು ಕೇಂದ್ರ ಜುಮಾ ಮಸೀದಿಗೊಳಪಟ್ಟ ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿಯ ನೂತನ ಅಧ್ಯಕ್ಷರಾಗಿ ಎಲ್.ಟಿ.ಅಬ್ದುರ್ರಝಾಕ್ ಹಾಜಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತ ಅಬಕಾರಿ ಅಧಿಕಾರಿ ಯಾಕೂಬ್ ಖಾನ್ ಬಪ್ಪಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಶುಕ್ರವಾರ ನಡೆಯಿತು. ನೂತನ ಉಪಾಧ್ಯಕ್ಷರಾಗಿ ಕೆ.ಎಂ.ಅಬ್ದುಲ್ಲ ಕೂರ್ನಡ್ಕ, ಖಜಾಂಚಿಯಾಗಿ ಇಸ್ಮಾಯೀಲ್ ಸಾಲ್ಮರ ಅವಿರೋಧವಾಗಿ ಆಯ್ಕೆಯಾದರು.
ಸದಸ್ಯರಾಗಿ ಅಬ್ದುಲ್ ರಹಿಮಾನ್ ಆಝಾದ್, ಪತ್ರಕರ್ತ ಶೇಖ್ ಝೈನುದ್ದೀನ್, ಅಬೂಬಕರ್ ಪರ್ಲಡ್ಕ, ವಿ.ಕೆ.ಶರೀಫ್ ಬಪ್ಪಳಿಗೆ, ಅಬ್ದುಲ್ ರಹಿಮಾನ್ ಸಾಲ್ಮರ, ಅಬ್ದುಲ್ ಹಮೀದ್ ಸಾಲ್ಮರ ಆಯ್ಕೆಯಾಗಿದ್ದಾರೆ.
ವಕ್ಫ್ ಚುನಾವಣಾಧಿಕಾರಿಗಳಾದ ಜಿಲ್ಲಾ ವಕ್ಫ್ ಕಾರ್ಯದರ್ಶಿ ಅಬೂಬಕರ್, ನಿವೃತ್ತ ಎಎಸ್ಐ ವಿ.ಮುಹಮ್ಮದ್ ಚುನಾವಣಾ ಪ್ರಕ್ರಿಯೆ ನಡೆಸಿದರು. ಬಳಿಕ ನಡೆದ ಸರಳ ಕಾರ್ಯಕ್ರಮದಲ್ಲಿ ಪೂರ್ವಾಧ್ಯಕ್ಷ ಯು.ಅಬ್ದುಲ್ಲ ಹಾಜಿ ಅಧಿಕಾರ ಹಸ್ತಾಂತರಿಸಿದರು.
ಪುತ್ತೂರು ಬದ್ರಿಯಾ ಮಸೀದಿಯ ಖತೀಬ್ ಮೊಯ್ದು ಫೈಝಿ ಕೊಡಗು ದುಆಗೈದರು. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾದ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಯಾಕೂಬ್ ಹಾಜಿ ದರ್ಬೆ, ನಝೀರ್ ಮಠ ಮತ್ತಿತರರು ಉಪಸ್ಥಿತರಿದ್ದರು.