ಬೀಕನ್ಸ್ ನಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಚಾಂಪಿಯನ್ಸ್
ಮೂಡುಬಿದಿರೆ, ಅ.6: ನಿಟ್ಟೆ ಸಮೂಹ ಸಂವಹನ ಸಂಸ್ಥೆಯ ವತಿಯಿಂದ ನಡೆದ ಆರನೇ ಆವೃತ್ತಿಯ ರಾಷ್ಟ್ರ ಮಟ್ಟದ ಬೀಕನ್ಸ್ ಮಾಧ್ಯಮೋತ್ಸವದಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು.
ಗೋವಾದ ಸೇಂಟ್ ಕ್ಸೇವಿಯರ್ ಕಾಲೇಜು ತಂಡರನ್ನರ್-ಅಪ್ ಆಗಿ ಹೊರಹೊಮ್ಮಿತು. ಬೀಕನ್ಸ್ನಲ್ಲಿ ವಿದ್ಯಾರ್ಥಿಗಳಿಗಾಗಿ ಡಾಕ್ಯೂಮೆಂಟರಿ, ಪಿಎಸ್ಎಆ್ಯಡ್, ಕಿರುಚಿತ್ರ, ಆ್ಯಡ್ ಫಿಲ್ಮ್, ಪಾಟ್ ಪೌರಿ, ನ್ಯೂಸ್ ಬುಲೆಟಿನ್, ಮಾಕ್ ಪ್ರೆಸ್, ಕ್ರಿಯೇಟಿವ್ರೈಟಿಂಗ್, ಡಿಬೇಟ್, ರೇಡಿಯೋಜಾಕಿ, ಪ್ರಾಡಕ್ಟ್ ಲಾಂಚ್, ಕ್ರೈಸಿಸ್ ಮ್ಯಾನೇಜ್ಮೆಂಟ್, ಕ್ವಿಜ್, ಮೂವಿ ಸ್ಪೂಫ್, ಎಸ್ಕೇಪ್ರೂಮ್, ಬೀದಿ ನಾಟಕ ಸೇರಿದಂತೆ ಅನೇಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಆಳ್ವಾಸ್ನ ಶ್ರೀರಾಜ್, ಜಾಫರ್, ಅಕ್ಷಯ, ನಿವೇದಿತಾ, ಅನುಷಾ, ಚೈತ್ರಾ, ವರುಣ್, ತೇಜು ಹಾಗೂ ಓಂಕಾರರನ್ನು ಒಳಗೊಂಡ ವಿದ್ಯಾರ್ಥಿ ತಂಡ ಬೀದಿ ನಾಟಕದಲ್ಲಿ ಪ್ರಥಮ, ಪಿಎಸ್ಆ್ಯಡ್ನಲ್ಲಿ ರಕ್ಷಿತ, ಸುಶಾಂತ್, ವರುಣ್, ಅಭಿನಂದನ್ ತಂಡ ಪ್ರಥಮ, ಹಾಗೂ ಎಸ್ಕೇಪ್ರೂಮ್ ಸ್ಪರ್ಧೆಯಲ್ಲಿ ತೆಂಝಿಲ್ ಪ್ರಥಮ ಸ್ಥಾನ ಪಡೆದರು.
ಮಾಕ್ ಪ್ರೆಸ್ನಲ್ಲಿ ಶ್ರೇಯಾ ಶೆಟ್ಟಿ ದ್ವಿತೀಯ, ಪ್ರಾಡಕ್ಟ್ ಲಾಂಚ್ನಲ್ಲಿ ಶ್ರೇಯಾ ಶೆಟ್ಟಿ ಹಾಗೂ ಓಂಕಾರ್ ದ್ವಿತೀಯ, ಕ್ರೈಸಿಸ್ ಮ್ಯಾನೇಜ್ಮೆಂಟ್ನಲ್ಲಿ ಗಗನ್ದೀಪ್ ಹಾಗೂ ಪುನೀತ್ ತಂಡ ದ್ವಿತೀಯ ಪ್ರಶಸ್ತಿಯನ್ನು ಬಾಚಿಕೊಂಡರು. ವಿದ್ಯಾರ್ಥಿಗಳಲ್ಲಿ ಮಾಧ್ಯಮದ ಕುರಿತು ಅರಿವು ಮೂಡಿಸುವ ಹಾಗೂ ಅದರ ಸಾಧನೆಗಳನ್ನು ಸ್ಮರಿಸುವ ಉದ್ದೇಶದಿಂದ ನಿಟ್ಟೆ ಸಂಸ್ಥೆ ಪ್ರತಿವರ್ಷ ಬೀಕನ್ಸ್ ಮಾಧ್ಯಮೋತ್ಸವವನ್ನು ನಡೆಸಿಕೊಂಡು ಬಂದಿದೆ. ನಿಟ್ಟೆ ವಿಜ್ಞಾನ ಮತ್ತು ತಂತ್ರಜ್ಞಾನ ಕಾಲೇಜಿನ ಡಾ. ಸ್ಮಿತಾ ಹೆಗ್ಡೆ ವಿಜೇತರಿಗೆ ಪ್ರಶಸ್ತಿಯನ್ನು ವಿತರಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥೆ ಡಾ ಮೌಲ್ಯ ಹಾಗೂ ಪದವಿ ವಿಭಾಗದ ಮುಖ್ಯಸ್ಥೆ ರೇಷ್ಮಾ ಉದಯ್ ಕುಮಾರ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದರು.