ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಉಡುಪಿ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಪ್ರಿಯಾಂಕ
ಉಡುಪಿ, ಅ.7: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನ.3ರಂದು ಮತದಾನ ನಡೆಯಲಿದೆ. ಆದುದರಿಂದ ಮಾದರಿ ಚುನಾವಣಾ ನೀತಿ ಸಂಹಿತೆಯು ಉಡುಪಿ ಜಿಲ್ಲೆಯಾದ್ಯಂತ ತಕ್ಷಣದಿಂದ ಜಾರಿಯಾಗಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಅವರು ಈ ವಿಷಯ ಪ್ರಕಟಿಸಿದರು. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನಾಂಕವಾಗಿದ್ದು, ಅ.17ರಂದು ನಾಮಪತ್ರಗಳ ಪರಿಶೀಲನೆ, ನಾಮಪತ್ರಗಳ ಹಿಂತೆಗೆದುಕೊಳ್ಳಲು ಅ.20ರಂದು ಕೊನೆಯ ದಿನ, ನ.6ರಂದು ಮತ ಎಣಿಕೆ ನಡೆಯಲಿದೆ. ನೀತಿ ಸಂಹಿತೆಯು ನ.8ರ ವ ರೆಗೆ ಜಾರಿಯಲ್ಲಿರು ತ್ತದೆ ಎಂದರು.
ಬೈಂದೂರು ವಿಧಾನ ಸಭಾ ಕ್ಷೆತ್ರದಲ್ಲಿ 221972 ಮತದಾರರಿದ್ದು, 1786 ವಿಕಲಚೇತನ ಮತದಾರರು ಮತ್ತು 33 ಸೇವಾ ಮತದಾರರಿದ್ದಾರೆ. 243 ಮತ ಗಟ್ಟೆಗಳನ್ನು ಮತ್ತು 3 ಹೆಚ್ಚುವರಿ ಮತಗಟ್ಟೆಗಳನ್ನು ತೆರೆಯಲಾಗಿದೆ. ಅರ್ಹತಾ ದಿನಾಂಕ 2018ರ ಜ.1ಕ್ಕೆ 18ವರ್ಷ ತುಂಬಿದವರು ಮತದಾರರ ಪಟ್ಟಿಗೆ ಹೆಸರು ನೊಂದಾವಣೆ ಹಾಗೂ ತಿದ್ದುಪಡಿಯನ್ನು ಬೈಂದೂರು ತಾಲೂಕು ಕಚೇರಿ ಯಲ್ಲಿ ಅ.9ರೊಳಗೆ ಮಾಡಬುದಾಗಿದೆ ಎಂದು ಅವರು ಹೇಳಿದರು.
ಸಹಾಯಕ ಚುನಾವಣಾಧಿಕಾರಿಯಾಗಿ ಜಿಲ್ಲಾಧಿಕಾರಿಗಳ ಭೂಮಾಪನಾ ತಾಂತ್ರಿಕ ಸಹಾಯಕರು ಹಾಗೂ ಭೂದಾಖಲೆಗಳ ಉಪ ನಿರ್ದೇಶಕರು ಉಡುಪಿ ಇವರನ್ನು ನೇಮಕ ಮಾಡಲಾಗಿದ್ದು, ಬೈಂದೂರು ತಾಲೂಕು ಕಚೇರಿ ಯಲ್ಲಿರುವ ಸ್ತ್ರೀಶಕ್ತಿ ಕೇಂದ್ರದಲ್ಲಿ ಇವರ ಕಚೇರಿ ತೆರೆಯಲಾಗಿದೆ. ಈ ಚುನಾವಣೆಯಲ್ಲಿ ಎವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗು ತ್ತದೆ ಎಂದು ಅವರು ತಿಳಿಸಿದರು.
3 ವೀಡಿಯೊ ಸವೇಲಯನ್ಸ್ ತಂಡ, 3 ಪ್ಲೈಯಿಂಗ್ ಸ್ಕ್ವಾಡ್, 2 ಸ್ಟಾಟಿಕ್ ಸರ್ವೆಲೈನ್ಸ್ ತಂಡ, 3 ಸೆಕ್ಟರ್ ಅಧಿಕಾರಿ ತಂಡ, 3 ವಿಡಿಯೋ ವೀಕ್ಷಣಾ ತಂಡ, ಒಂದು ಮಾದರಿ ನೀತಿ ಸಂಹಿತೆ ತಂಡ ಮತ್ತು 1 ಲೆಕ್ಕಪತ್ರ ತಂಡವನ್ನು ರಚಿಸಲಾಗಿದೆ. ಚುನಾವಣೆ ಕರ್ತವ್ಯಕ್ಕೆ 246 ಮತಗಟ್ಟೆ ಅಧಿಕಾರಿಗಳು, 246 ಸಹಾಯಕ ಮತಗಟ್ಟೆ ಅಧಿಕಾರಿಗಳು, 738 ಮತಗಟ್ಟೆ ಅಧಿಕರಿಗಳು ಹಾಗೂ 123 ಮೀಸಲು ಸಿಬ್ಬಂದಿಗಳ ಅಗತ್ಯ ಇದೆ ಎಂದರು.
ಚುನಾವಣಾ ಸಂಬಂಧ ದೂರು ಸ್ವೀಕಾರಕ್ಕಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ದೂರು ಕೋಶ ತೆರೆಯಲಾಗಿದ್ದು, ಕಂಟ್ರೋಲ್ ರೂಂ ಟೋಲ್ ಫ್ರೀ ನಂ.1077, ದೂ.ಸಂ. 0820-2574920, ಬೈಂದೂರು ತಾಲೂಕು ಕಚೇರಿ ದೂ.ಸಂ. 08254-251657ನ್ನು ಸಂಪರ್ಕಿಸಬಹುದು. ಮತಯಂತ್ರ ಗಳ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕಾರ್ಯಕ್ರಮವು ಬೈಂದೂರಿನಲ್ಲಿ ನಡೆಯಲಿದೆ. ಮತದಾನದ ನಂತರ ಮತಯಂತ್ರಗಳನ್ನು ಶಿವಮೊಗ್ಗಕ್ಕೆ ತಲುಪಿಸ ಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಕುಂದಾಪುರ ವಿಭಾಗದ ಸಹಾಯಕ ಆಯುಕ್ತ ಭೂಬಾಲನ್, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ಅನಧಿಕೃತ ಕಟೌಟ್ ತೆರವು
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ದೇವಸ್ಥಾನ ಸೇರಿದಂತೆ ಅನುಮತಿ ಇಲ್ಲದ ಕಟೌಟ್ಗಳನ್ನು ತೆರವುಗೊಳಿಸಲಾಗುವುದು. ಧಾರ್ಮಿಕ ಸ್ಥಳಗಳಲ್ಲಿ ಚುನಾವಣೆ ಪ್ರಚಾರ ಮಾಡಬಾರದು. ಸರಕಾರಿ ಕಾರ್ಯಕ್ರಮಗಳ ಕಟೌಟ್ ಗಳನ್ನು ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.