ಬಂಟ್ವಾಳ: ತಂಡಿದಿಂದ ಯುವಕನಿಗೆ ಹಲ್ಲೆ; ದೂರು
ಬಂಟ್ವಾಳ, ಅ. 7: ಕಾರಿನಲ್ಲಿ ಬಂದ ತಂಡವೊಂದು ಯುವಕನೋರ್ವನಿಗೆ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟು ಎಂಬಲ್ಲಿ ರವಿವಾರ ನಡೆದಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಇಲ್ಲಿನ ಮೈರಾನ್ಪಾದೆಯ ಭಂಡಾರಿಬೆಟ್ಟು ನಿವಾಸಿ ಪ್ರವೀಣ್ ಹಲ್ಲೆಗೊಳಗಾದ ಯುವಕ. ಕಾರಿನಲ್ಲಿ ಬಂದ ಯುವಕರ ತಂಡ ಪ್ರವೀಣ್ ಅವರ ಮೊಬೈಲ್ ಕಸಿದುಕೊಂಡು, ಹಲ್ಲೆ ನಡೆಸಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯಿಂದ ಪ್ರವೀಣ್ ಗಾಯಗೊಂಡಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ನಗರ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
Next Story