ಪಿಎಫ್ಐ ವಿಟ್ಲ ವಲಯದಿಂದ ರಕ್ತದಾನ ಶಿಬಿರ
ಬಂಟ್ವಾಳ, ಅ. 8: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿಟ್ಲ ವಲಯ ಮತ್ತು ಯೆನೆಪೊಯ ಮೆಡಿಕಲ್ ಕಾಲೇಜ್ ದೇರಳಕಟ್ಟೆ ಸಹಕಾರದೊಂದಿಗೆ ವಿಟ್ಲದಲ್ಲಿ ರಕ್ತದಾನ ಶಿಬಿರ ರವಿವಾರ ನಡೆಯಿತು.
ಪಿಎಫ್ಐ ಬಂಟ್ವಾಳ ತಾಲೂಕು ಪ್ರಧಾನ ಕಾರ್ಯದರ್ಶಿ ಸಲೀಂ ಕುಂಪನಮಜಲು ಶಿಬಿರದ ಅಧ್ಯಕ್ಷತೆ ವಹಿಸಿದ್ದರು. ಎಸ್ಡಿಪಿಐ ಪುತ್ತೂರು ವಿಧಾನ ಸಭಾ ಅಧ್ಯಕ್ಷ ಸಿದ್ದೀಕ್ ಪುತ್ತೂರು ಮಾತನಾಡಿ, ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಜಗತ್ತಿನಲ್ಲಿ ಯಾವುದೂ ಇಲ್ಲಾ. ಇಂತಹ ರಕ್ತದಾನದಿಂದ ಮಾತ್ರ ರಕ್ತ ಶೇಖರಿಸಲು ಸಾಧ್ಯ ಎಂದು ತಿಳಿಸಿದರು.
ವಿಟ್ಲ ಜುಮಾ ವಸೀದಿ ಆಡಳಿತ ಸಮಿತಿ ಅಧ್ಯಕ್ಷ ವಿ.ಎಚ್ ಅಶ್ರಫ್, ವಿಟ್ಲ ಪಟ್ಟಣ ಪಂಚಾಯತ್ ವಿಪಕ್ಷ ನಾಯಕ ಅಶೋಕ್ ಕುಮಾರ್ ಶೆಟ್ಟಿ, ವಿಟ್ಲ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾ ಡಾ. ಪ್ರಶಾಂತ್, ಲಕ್ಷ್ಮೀನಾರಾಯಣ ಅಡ್ಯಂತಾಯ, ಪಿಎಪ್ಐ ಮುಖಂಡ ಕಮರದ್ದೀನ್, ವಿ.ಎಸ್ ಇಬ್ರಾಹಿಂ ಒಕ್ಕೆತ್ತೂರು, ಖಲಂದರ್ ಪರ್ತಿಪ್ಪಾಡಿ, ಅಬ್ದುಲ್ ಅಝೀಝ್ ಕಡಂಬು, ಶಾಕಿರ್ ಅಳಕೆಮಜಲು ಮೊದಲಾದವರು ಉಪಸ್ಥಿತರಿದ್ದರು.
Next Story