ನಿರುದ್ಯೋಗಿ ಪದವೀಧರರಿಗೆ ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ
ಉಡುಪಿ, ಅ.9: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2018-19ನೇ ಸಾಲಿಗೆ ಹಿಂದುಳಿದ ವರ್ಗಗಳ ನಿರುದ್ಯೋಗಿ ಪದವೀಧರರಿಗೆ ಸ್ವಯಂಉದ್ಯೋಗ ಸಾಲ ಸೌಲಭ್ಯವನ್ನು ವಾರ್ಷಿಕ ಶೇ.6ರ ಬಡ್ಡಿದರದಲ್ಲಿ ಗರಿಷ್ಠ 10 ಲಕ್ಷ ರೂ.ಗಳವರೆಗೆ ಸಾಲ ಒದಗಿಸಲಾಗುತಿದ್ದು, ಈ ಯೋಜನೆಯಲ್ಲಿ ಸೌಲ್ಯ ಪಡೆಯಲು ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 40,000 ರೂ., ಪಟ್ಟಣ ಪ್ರದೇಶದವರಿಗೆ 55,000 ರೂ. ಒಳಗಿರಬೇಕು, ಅರ್ಜಿದಾರರು ಪದವೀಧರ ನಿರುದ್ಯೋಗಿ ಗಳಾಗಿರಬೇಕು. ಅರ್ಜಿದಾರರು ಆಧಾರ್ ಸಂಖ್ಯೆ, ಐಎಫ್ಸಿ ಕೋಡ್ ಹೊಂದಿರುವ ರಾಷ್ಟ್ರೀಕೃತ/ಗ್ರಾಮೀಣ ಬ್ಯಾಂಕ್ ಖಾತೆಗಳನ್ನು ಹೊಂದಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 25ರಿಂ ಗರಿಷ್ಠ 40ವರ್ಷದೊಳಗಿರಬೇಕು.
ಆಸಕ್ತರು ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಿಂದ ಉಚಿತ ಅರ್ಜಿ ಗಳನ್ನು ಅಥವಾ ನಿಗಮದ ವೆಬ್ಸೈಟ್ - www.karnataka.gov.in/dbcdc ನಿಂದ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಅ.20ರ ಒಳಗೆ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಜಿಲ್ಲಾಧಿಕಾರಿಗಳ ಸಂಕೀರ್ಣ, ಮಣಿಪಾಲ, ಉಡುಪಿ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0820-2574882ನ್ನು ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ಉಡುಪಿ ಇವರ ಪ್ರಕಟಣೆ ತಿಳಿಸಿದೆ.