ಬಡಾ ಗ್ರಾಪಂಗೆ ಕಾಮಗಾರಿಗಳ ಧೃಢೀಕರಣ ಪತ್ರ ಹಸ್ತಾಂತರ
ಪಡುಬಿದ್ರೆ, ಅ.10: ಅದಾನಿ ಸಮೂಹದ ಯುಪಿಸಿಎಲ್ ಸಂಸ್ಥೆಯು ಬಡಾ ಗ್ರಾಪಂಗೆ 2018-19ನೇ ವಾರ್ಷಿಕ ಸಾಲಿನಲ್ಲಿ ಸಿಎಸ್ಆರ್ ಅನುದಾನದಡಿ ಒಂದು ಕೋಟಿ ರೂ. ವಿವಿಧ ಕಾಮಗಾರಿಗಳನ್ನು ನಿರ್ವಹಿಸುವುದರ ಬಗ್ಗೆ ಧೃಢೀಕರಣ ಪತ್ರವನ್ನು ಇಂದು ಹಸ್ತಾಂತರಿಸಿತು.
ಗ್ರಾಪಂ ಕಛೇರಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಬಡಾ ಗ್ರಾಪಂ ಅಧ್ಯಕ್ಷೆ ನಾಗರತ್ನ ಕರ್ಕೇರ ಅವರಿಗೆ ಯುಪಿಸಿಎಲ್ ಕಂಪನಿಯ ಕಾರ್ಯನಿರ್ವಾ ಹಕ ಅಧ್ಯಕ್ಷ ಕಿಶೋರ್ ಆಳ್ವ 2018-19ನೇ ವಾರ್ಷಿಕ ಸಾಲಿನ ಕ್ರಿಯಾಯೋಜನೆ ಯಲ್ಲಿ ನಮೂದಿಸಿರುವ ಅಭಿವೃದ್ಧಿ ಹೊಂದಬೇಕಾದ ವಿವಿಧ ಕಾಮಗಾರಿಗಳನ್ನು ಅದಾನಿ ಯುಪಿಸಿಎಲ್ ಸಿಎಸ್ಆರ್ ಅನುದಾನಡಿಯಲ್ಲಿ ನಿರ್ವಹಿಸಲಾಗು ವುದು ಎಂದು ಸೂಚಿಸುವ ಧೃಢೀಕರಣ ಪತ್ರವನ್ನು ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೈ.ಎಸ್.ಕುಶಾಲಿನಿ, ಉಪಾಧ್ಯಕ್ಷೆ ಇಂದಿರಾ ಶೆಟ್ಟಿ, ತಾಪಂ ಸದಸ್ಯ ಶೇಖಬ್ಬ, ಜಿಪಂ ಸದಸ್ಯೆ ಶಿಲ್ಪ ಸುವರ್ಣ, ಗ್ರಾಪಂ ಸದಸ್ಯರಾದ ಚಂದ್ರಶೇಖರ ಕೋಟಿಯಾನ್, ಉದಯ ಕುಮಾರ್, ಶಕುಂತಳಾ, ರಫೀಕ್, ಯುಪಿಸಿಎಲ್ ಸಂಸ್ಥೆಯ ಏಜಿಎಂ ಗಿರೀಶ್ ನಾವಡ, ಹಿರಿಯ ವ್ಯವಸ್ಥಾಪಕ ರವಿ ಆರ್.ಜೇರೆ, ಅದಾನಿ ೌಂಡೇಷನ್ನ ಸದಸ್ಯರಾದ ವಿನೀತ್ ಅಂಚನ್, ಸುಕೇಶ್ ಸುವರ್ಣ, ಅನುದೀಪ್ ಪೂಜಾರಿ ಉಪಸ್ಥಿತರಿದ್ದರು.