ಅಪರಿಚಿತ ವಾಹನ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು
ಕಾಪು, ಅ.10: ಉದ್ಯಾವರ ಸೇತುವೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.9 ರಂದು ರಾತ್ರಿ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಉದ್ಯಾವರ ಕೇದಾರ್ ನಿವಾಸಿ ಮಧುಕರ್(43) ಎಂದು ಗುರು ತಿಸಲಾಗಿದೆ. ಸ್ಕೂಟರ್ಗೆ ಹಿಂದಿನಿಂದ ಬಂದ ವಾಹನ ಢಿಕ್ಕಿ ಹೊಡೆದ ಪರಿ ಣಾಮ ಸವಾರ ಮಧುಕರ್ ವಾಹನ ಸಮೇತ ರಸ್ತೆಗೆ ಬಿದ್ದರೆನ್ನಲಾಗಿದೆ. ಢಿಕ್ಕಿ ಹೊಡೆದ ವಾಹನ ನಿಲ್ಲಿಸದೆ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಮಧುಕರ್ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story